AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನ್ ಅವರನ್ನು ತೆಗೆದುಹಾಕಿ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿರಿ; ಸಂಸತ್​​ನಲ್ಲಿ ಅಖಿಲೇಶ್ ಯಾದವ್ ವ್ಯಂಗ್ಯ

ಪ್ರಧಾನ್ ಅವರನ್ನು ತೆಗೆದುಹಾಕಿ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿರಿ; ಸಂಸತ್​​ನಲ್ಲಿ ಅಖಿಲೇಶ್ ಯಾದವ್ ವ್ಯಂಗ್ಯ

ಸುಷ್ಮಾ ಚಕ್ರೆ
|

Updated on: Jul 28, 2026 | 4:10 PM

Share

ಸಮಾಜವಾದಿ ಪಾರ್ಟಿ (SP) ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಸಂಸತ್ತಿನಲ್ಲಿ, ಪ್ರಧಾನ ಮಂತ್ರಿಯವರನ್ನು ಉಳಿಸಲು ಸರ್ಕಾರವು ಧರ್ಮೇಂದ್ರ ಪ್ರಧಾನ್ ಅವರನ್ನು ತೆಗೆದುಹಾಕಿದೆ ಎಂದು ಹೇಳಿದರು. "ಪ್ರಧಾನ್ ಅವರನ್ನು ತೆಗೆದುಹಾಕುವ ಮೂಲಕ ತಮ್ಮ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡೆವು ಎಂದು ಸರ್ಕಾರ ನಿಟ್ಟುಸಿರು ಬಿಟ್ಟಿರಬಹುದು" ಎಂದು ಅವರು ತಿಳಿಸಿದರು. "ಯುವಜನತೆ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಸ್ವೀಕರಿಸುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದೂ ಅವರು ಹೇಳಿದರು.

ನವದೆಹಲಿ, ಜುಲೈ 28: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ್ದರು. ಈ ಬಗ್ಗೆ ಇಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿರುವ ಸಮಾಜವಾದಿ ಪಾರ್ಟಿ (SP) ಅಧ್ಯಕ್ಷ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರ ಪ್ರಧಾನ್ ಅವರನ್ನು ತೆಗೆದುಹಾಕುವ ಮೂಲಕ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ವಿಧೇಯಕದ ಕುರಿತು ಲೋಕಸಭೆಯಲ್ಲಿ ನಡೆದ 10 ಗಂಟೆಗಳ ಸುದೀರ್ಘ ಚರ್ಚೆಯ ವೇಳೆ ಮಾತನಾಡಿದ ಅಖಿಲೇಶ್ ಯಾದವ್, “ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಸರ್ಕಾರವು ತನ್ನ ಪ್ರಧಾನ ಮಂತ್ರಿಯನ್ನು ಉಳಿಸಿಕೊಂಡಿದೆ. ಸರ್ಕಾರವನ್ನು ತಲೆಬಾಗುವಂತೆ ಮಾಡಿದ ಯುವಜನತೆಯ ಮನೋಬಲ ಮತ್ತು ಒಗ್ಗಟ್ಟಿಗೆ ನಾನು ಸಲಾಂ ಹೇಳುತ್ತೇನೆ. ಪ್ರಧಾನ್ ಅವರನ್ನು ಪದಚ್ಯುತಿಗೊಳಿಸಿ ಮಂತ್ರಿಯನ್ನು ಉಳಿಸಿದ್ದಕ್ಕೆ ಬಿಜೆಪಿ ಸಂಸದರು ನಿಟ್ಟುಸಿರು ಬಿಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us