‘ಕುಟುಂಬದಿಂದ ದೂರ ಇರಬೇಕು, ಇಲ್ಲದಿದ್ರೆ ಒಳಿತಾಗಲ್ಲ’; ಪ್ರತಾಪ್​ಗೆ ಗುರೂಜಿ ಹಿತವಚನ

Updated on: Jan 02, 2024 | 8:54 AM

‘ಕುಟುಂಬದಿಂದ ದೂರ ಇರಬೇಕು. ಕುಟುಂಬ ಜೀವನ ನಿನಗೆ ಸರಿ ಹೊಂದಲ್ಲ. ದೂರ ಇದ್ದು ಧೂಪ ಆಗ್ತಿಯೋ, ಹತ್ತಿರ ಇದ್ದು ಹೇಸಿಗೆ ಆಗ್ತಿಯೋ ನಿನಗೆ ಬಿಟ್ಟಿದ್ದು’ ಎಂದು ಡ್ರೋನ್ ಪ್ರತಾಪ್​ಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಹೇಳಿದರು.

ಬಿಗ್ ಬಾಸ್ ಮನೆಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರ ಆಗಮನ ಆಗಿದೆ. ಅವರು ಸ್ಪರ್ಧಿಗಳ ಎದುರು ಕುಳಿತು ಭವಿಷ್ಯ ಹೇಳಿದ್ದಾರೆ. ವರ್ತೂರು ಸಂತೋಷ್ ಅವರ ತೊಡೆಯ ಮೇಲೆ ಟ್ಯಾಟೂ ಇದೆ. ಇದರಿಂದಲೇ ಎಲ್ಲವೂ ಕೆಟ್ಟದಾಗುತ್ತಿದೆ ಎಂದು ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಹೇಳಿದ್ದಾರೆ. ಮತ್ತೊಂದು ಶಾಕಿಂಗ್ ಭವಿಷ್ಯವನ್ನು ಅವರು ನುಡಿದಿದ್ದಾರೆ. ಪ್ರತಾಪ್ (Prathap) ಕುಟುಂಬದ ಜೊತೆ ಮತ್ತೆ ಸೇರಿದ್ದಾರೆ. ಆದರೆ, ಕುಟುಂಬದಿಂದ ದೂರ ಇರಬೇಕು ಎಂದು ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಹೇಳಿದ್ದಾರೆ. ‘ಕುಟುಂಬದಿಂದ ದೂರ ಇರಬೇಕು. ಕುಟುಂಬ ಜೀವನ ನಿನಗೆ ಸರಿ ಹೊಂದಲ್ಲ. ದೂರ ಇದ್ದು ಧೂಪ ಆಗ್ತಿಯೋ, ಹತ್ತಿರ ಇದ್ದು ಹೇಸಿಗೆ ಆಗ್ತಿಯೋ ನಿನಗೆ ಬಿಟ್ಟಿದ್ದು’ ಎಂದರು ಅವರು. ಇದನ್ನು ಕೇಳಿ ಅವರು ಶಾಕ್ ಆದರು. ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More