AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಗುಟ್ಕಾ, ಮದ್ಯಕ್ಕಾಗಿ ಮತ್ತೊಮ್ಮೆ ಅರೆಬೆತ್ತಲಾಗಿ ಟವರ್ ಏರಿ ಕುಳಿತ ಯುವಕ

ವಿಜಯಪುರ: ಗುಟ್ಕಾ, ಮದ್ಯಕ್ಕಾಗಿ ಮತ್ತೊಮ್ಮೆ ಅರೆಬೆತ್ತಲಾಗಿ ಟವರ್ ಏರಿ ಕುಳಿತ ಯುವಕ

ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Aug 17, 2023 | 7:52 PM

Share

ಇತ್ತೀಚೆಗೆ, ಟವರ್​ಗಳನ್ನು ಏರಿ ಹಚ್ಚಾಟ ಮೆರೆದು ಜನರಲ್ಲಿ ಆತಂಕ ಸೃಷ್ಟಿಸುವ ಪ್ರಕರಣಗಳು ಹೆಚ್ಚುತ್ತಿವೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಯುವಕನೊಬ್ಬ ಅರೆಬೆತ್ತಲಾಗಿ ಮೊಬೈಲ್ ಟವರ್ ಏರಿದ್ದಾನೆ. ಆದರೆ ಈತನ ಈ ಹುಚ್ಚಾಟ ಇದೇ ಮೊದಲಲ್ಲ. ಇದಕ್ಕೂ ಹಿಂದೆ ಈ ರೀತಿ ಟವರ್ ಏರಿದ್ದನು.

ವಿಜಯಪುರ, ಆಗಸ್ಟ್ 17: ಬೃಹತ್ ಮೊಬೈಲ್ ಟವರ್ ಮೇಲೇರಿದ ಅರೆಬೆತ್ತಲೆ ಯುವಕನೊಬ್ಬ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಜಿಲ್ಲೆಯ ಸಿಂದಗಿ (Sindagi Town) ಪಟ್ಟಣದಲ್ಲಿ ನಡೆದಿದೆ. ಇಂಡಿ ತಾಲೂಕಿನ ತೆಗ್ಗಿಹಳ್ಳಿ ಗ್ರಾಮದ ಸತೀಶ್ ಟವರ್ ಏರಿದ ಯುವಕನಾಗಿದ್ದಾನೆ. ಇತ್ತೀಚೆಗೆ ಸಿಂದಗಿ ತಾಲೂಕಿನ ಬಳಗಾನೂರ, ಚಾಂದಕವಟೆ ಗ್ರಾಮದಲ್ಲಿ ಟವರ್ ಮೇಲೇರಿ ಆತಂಕ ಸೃಷ್ಟಿಸಿದ್ದ ಯುವಕನೂ ಈತನೇ. ಅಂದು ಮತ್ತು ಇಂದು ಟವರ್ ಏರಿದ್ದು ಮಾತ್ರ ಗುಟ್ಕಾ ಹಾಗೂ ಮದ್ಯಕ್ಕಾಗಿ. ಸದ್ಯ ಜನರು ಗುಟ್ಕಾ, ಮದ್ಯ ನೀಡುವುದಾಗಿ ಹೇಳಿ ಯುವಕನನ್ನು ಕೆಳಗಿಳಿಸಿ ಆತನಿಗೆ ಬಟ್ಟೆ ತೊಡಿದ್ದಾರೆ. ಈತನ ಈ ದುಸ್ಸಾಹಕ್ಕೆ ಜನರು ಬೇಸತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More