ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸರು ಮಾಡಿದ್ದೇನು ನೀವೇ ನೋಡಿ

Edited By:

Updated on: Sep 30, 2024 | 9:49 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣೆ ಮುಂದೆ ಓರ್ವ ಯುವಕ ಹೈಡ್ರಾಮಾ ಮಾಡಿದ್ದಾನೆ. ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದ ಸವಾರರಿಗೆ ದಂಡ ಹಾಕಲು ಬಿಡದೆ, ಪೊಲೀಸರನ್ನ ನೋಡಿ ಡ್ಯಾನ್ಸ್ ಮಾಡಿದ್ದಾನೆ. ಲಾಠಿಯಿಂದ ಹೊಡೆದರೂ ಬಿಡದ ಯುವಕ, ಕೊನೆಗೆ ಪೊಲೀಸರು ಏನು ಮಾಡಿದರು ನೋಡಿ.

ನೆಲಮಂಗಲ, ಸೆಪ್ಟೆಂಬರ್ 30: ಪೊಲೀಸ್ ಠಾಣೆ ಮುಂದೆ ಯುವಕ ಹೈಡ್ರಾಮಾ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ಟೌನ್ ಪೊಲೀಸ್ ಠಾಣೆ ಮುಂದೆ ನಡೆದಿದೆ. ಹರೀಶ್ ಕುಮಾರ್ ಹೈಡ್ರಾಮಾ ಮಾಡಿದ ಯುವಕ. ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದ ವಾಹನ ಸವಾರರಿಗೆ ದಂಡ ಹಾಕಲು ಬಿಡದೆ ತೊಂದರೆ ನೀಡಿದ್ದಾನೆ. ಪೊಲೀಸರನ್ನ ನೋಡಿ ಡ್ಯಾನ್ಸ್ ಮಾಡುತ್ತಾ ನಿಂತಿದ್ದಾನೆ. ಲಾಠಿಯಿಂದ ಹೊಡೆದಿದ್ದಕ್ಕೆ ಮತ್ತಷ್ಟು ಹೈಡ್ರಾಮಾ ಮಾಡಿದ್ದು, ಕೊನೆಗೆ ಪೊಲೀಸರು ಯುವಕನಿಗೆ ಹಣ ಕೊಟ್ಟು ಕಳಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More