AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಸುಷ್ಮಾ ಚಕ್ರೆ
|

Updated on: Jun 24, 2025 | 10:22 PM

Share

ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗ್ರಾಮಸ್ಥರು ಕಪ್ಪು ಚಿರತೆಯ ಮೇಲೆ ಇಟ್ಟಿಗೆ ಎಸೆಯುತ್ತಿದ್ದಂತೆ ಇಟ್ಟಿಗೆ ಗೂಡುಗಳಲ್ಲಿ ಕಪ್ಪು ಚಿರತೆಯೊಂದಿಗೆ ವ್ಯಕ್ತಿ ಸೆಣಸಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಗಾಯಗೊಂಡ ಚಿರತೆ ದಾಳಿ ಮಾಡಿದಾಗ ಆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತಷ್ಟು ಅಪಾಯಕ್ಕೆ ಸಿಲುಕಿದ್ದು, ಐವರು ಗಾಯಗೊಂಡರು.

ಲಖೀಂಪುರ ಖೇರಿ, ಜೂನ್ 24: ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿಯ ಧೌರ್ಪುರ್ ಅರಣ್ಯ ಪ್ರದೇಶದ ಜುಗ್ನುಪುರ್ ಪ್ರದೇಶದ ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ಮಾಡಿತು. ಈ ವೇಳೆ ಯುವಕನೊಬ್ಬ ಚಿರತೆಯನ್ನು ಕೆಡವಿ ಅದರ ಜೊತೆ ಸೆಣಸಾಡಿದ್ದಾನೆ. ಈ ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಕಪ್ಪು ಚಿರತೆಯ (Black Leopard) ಮೇಲೆ ಇಟ್ಟಿಗೆಗಳು ಮತ್ತು ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ಘಟನೆಯ ವಿಡಿಯೋದಲ್ಲಿ ಕಪ್ಪು ಚಿರತೆ ಯುವಕನ ಹಿಡಿತದಿಂದ ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ನೋಡಬಹುದು. ಗ್ರಾಮಸ್ಥರು ಆ ಚಿರತೆಯ ಮೇಲೆ ಇಟ್ಟಿಗೆಗಳನ್ನು ಎಸೆಯುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ