AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಸುಷ್ಮಾ ಚಕ್ರೆ
|

Updated on: Jun 24, 2025 | 10:22 PM

Share

ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗ್ರಾಮಸ್ಥರು ಕಪ್ಪು ಚಿರತೆಯ ಮೇಲೆ ಇಟ್ಟಿಗೆ ಎಸೆಯುತ್ತಿದ್ದಂತೆ ಇಟ್ಟಿಗೆ ಗೂಡುಗಳಲ್ಲಿ ಕಪ್ಪು ಚಿರತೆಯೊಂದಿಗೆ ವ್ಯಕ್ತಿ ಸೆಣಸಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಗಾಯಗೊಂಡ ಚಿರತೆ ದಾಳಿ ಮಾಡಿದಾಗ ಆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತಷ್ಟು ಅಪಾಯಕ್ಕೆ ಸಿಲುಕಿದ್ದು, ಐವರು ಗಾಯಗೊಂಡರು.

ಲಖೀಂಪುರ ಖೇರಿ, ಜೂನ್ 24: ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿಯ ಧೌರ್ಪುರ್ ಅರಣ್ಯ ಪ್ರದೇಶದ ಜುಗ್ನುಪುರ್ ಪ್ರದೇಶದ ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ಮಾಡಿತು. ಈ ವೇಳೆ ಯುವಕನೊಬ್ಬ ಚಿರತೆಯನ್ನು ಕೆಡವಿ ಅದರ ಜೊತೆ ಸೆಣಸಾಡಿದ್ದಾನೆ. ಈ ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಕಪ್ಪು ಚಿರತೆಯ (Black Leopard) ಮೇಲೆ ಇಟ್ಟಿಗೆಗಳು ಮತ್ತು ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ಘಟನೆಯ ವಿಡಿಯೋದಲ್ಲಿ ಕಪ್ಪು ಚಿರತೆ ಯುವಕನ ಹಿಡಿತದಿಂದ ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ನೋಡಬಹುದು. ಗ್ರಾಮಸ್ಥರು ಆ ಚಿರತೆಯ ಮೇಲೆ ಇಟ್ಟಿಗೆಗಳನ್ನು ಎಸೆಯುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More