ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
|

Updated on: Jul 08, 2024 | 3:41 PM

ಕಾರಲ್ಲಿ ಬಂದಿದ್ದ ಯುವತಿ ಪ್ರಾಯಶಃ ತನ್ನ ಗುರುತು ಸಿಗಬಾರದೆನ್ನುವ ಕಾರಣಕ್ಕೆ ಮುಖಕ್ಕೆ ಮಾಸ್ಕ್ ಧರಿಸಿದ್ದರು. ಅದು ಸಹಜವೇ, ಅರೋಪಿಗಳನ್ನು ಅಥವಾ ಅಪರಾಧಿಗಳನ್ನು ಭೇಟಿಯಾಗಲು ಬರುವ ಜನ ಅದಲ್ಲೂ ವಿಶೇಷವಾಗಿ ಮಹಿಳೆಯರು ಮಾಧ್ಯಮಗಳಿಗೆ ತಮ್ಮ ಗುರುತು ಸಿಗದಿರಲೆಂದದು ಮಾಸ್ಕ್ ಧರಿಸುತ್ತಾರೆ. ಒಂದು ಕುತೂಹಲಕಾರಿ ಸಂಗತಿಯೆಂದರೆ ಅವರು ಬಂದಿದ್ದ ಕಾರಿನ ಮೇಲೆ ಪ್ರೆಸ್ ಅಂತ ಒಂದು ಚಿಕ್ಕ ಸ್ಟಿಕ್ಕರ್ ಇತ್ತು.

ಆನೇಕಲ್ (ಬೆಂಗಳೂರು): ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನ ಬಳಿ ಯಾವುದಾದರೂ ಘಟನೆ ಪ್ರತಿದಿನ ನಡೆಯುತ್ತಿರುತ್ತದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಜೊತೆ 14 ಅರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಅವರ ಪೈಕಿ ನಗರದಲ್ಲಿರುವ ಸ್ಟೋನಿ ಬ್ರೂಕ್ ಪಬ್ ಮಾಲೀಕ ವಿನಯ್ ಕೂಡ ಒಬ್ಬರು. ವಿನಯ್ ನನ್ನು ನೋಡಲು ಇಂದು ಅವರ ಸ್ನೇಹಿತೆ ಅಂತ ಹೇಳಿಕೊಂಡು ಯುವತಿಯೊಬ್ಬರು ಬಂದಿದ್ದರು. ಯುವತಿಯ ಜೊತೆ ಒಬ್ಬ ಯುವಕ ಕೂಡ ಇದ್ದರು. ಅವರು ಯುವತಿಯ ಸ್ನೇಹಿತನೋ, ಸಹೋದರನೋ ಅಥವಾ ಬಂಧುವೋ ಅನ್ನೋದು ಗೊತ್ತಾಗಿಲ್ಲ. ಯುವಕನ ಕೈಲಿ ಸೇಬುಹಣ್ಣುಗಳಿರುವ ಒಂದು ಪಾಲಿಥೀನ್ ಬ್ಯಾಗಿದೆ. ವಿಷಯ ಅದಲ್ಲ, ಇವರಿಬ್ಬರು ವಿನಯ್ ನನ್ನು ಕಾಣಲು ಅನುಮತಿ ಪಡೆದು ಜೈಲಿನ ಒಳಗೆ ಹೋದರೂ ಅರೋಪಿಯನ್ನು ಭೇಟಿಯಾಗುವುದು ಸಾಧ್ಯವಾಗಿಲ್ಲ, ವಿನಯ್ ಭೇಟಿಯಾಗಲು ನಿರಾಕರಿಸಿದನೋ ಅಥವಾ ಜೈಲು ಅಧಿಕಾರಿಗಳಿಂದ ಅಡಚಣೆ ಎದುರಾಯಿತೋ ಅನ್ನೋದೂ ಗೊತ್ತಾಗಲಿಲ್ಲ. ಯಾಕೆಂದರೆ, ಯುವಕ ಮತ್ತು ಯುವತಿ ಜೈಲು ಆವರಣದಿಂದ ಹೊರಬಂದು ಯಾರೊಂದಿಗೂ ಮಾತಾಡದೆ ಕಾರು ಹತ್ತಿ ಹೊರಟುಬಿಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆಯನ್ನು ಮಾಧ್ಯಮಗಳಿಗಾಗಿ ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಜಿ ಪರಮೇಶ್ವರ್

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ