ಮೊಹಮದ್ ನಲಪಾಡ್ ವಿರುದ್ದ ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು
ಮೊಹಮದ್ ನಲಪಾಡ್ ವಿರುದ್ದ ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು

ಮೊಹಮದ್ ನಲಪಾಡ್ ವಿರುದ್ದ ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು

ಸಾಧು ಶ್ರೀನಾಥ್​

Updated on: Apr 22, 2021 | 4:32 PM

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಂ ಸ್ಥಾಪನೆ ವಿಚಾರವಾಗಿ ನಲಪಾಡ್ ಹಾಗೂ ರಕ್ಷಾ ರಾಮಯ್ಯ ಹಾಗೂ ಬೆಂಬಲಿಗರ ನಡುವೆ ಬುಧವಾರ  ವಾಗ್ವಾದವಾಗಿತ್ತು. ಗಲಾಟೆ ಬಳಿಕ ರಕ್ಷಾ ರಾಮಯ್ಯ ಬೆಂಬಲಿಗರಾದ ಭವ್ಯ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ದ ಹೈಗ್ರೌಂಡ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯರಿಂದ ದೂರು ದಾಖಲಾಗಿದ್ದು, ನಿನ್ನೆ ನಲಪಾಡ್ ಮತ್ತು ಬೆಂಬಲಿಗರು ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ದೂರು ನೀಡಿದ್ದಾರೆ ಭವ್ಯ.ನಿನ್ನೆ ಕೋವಿಡ್ ವಾರ್ ರೂಮ್ ವಿಚಾರವಾಗಿ ನಲಪಾಡ್ ಹಾಗೂ ರಕ್ಷಾ ರಾಮಯ್ಯ ಹಾಗೂ ಬೆಂಬಲಿಗರ ನಡುವೆ ವಾಗ್ವಾದವಾಗಿತ್ತು ,ಗಲಾಟೆ ಬಳಿಕ ಪೋಲಿಸ್ ಠಾಣರ ಮೆಟ್ಟಿಲೇರಿದ ರಕ್ಷಾ ರಾಮಯ್ಯ ಬೆಂಬಲಿಗರಾದ ಭವ್ಯ ದೂರು ನೀಡಿದ್ದಾರೆ.

ಭವ್ಯ ನೀಡಿರುವ ದೂರಿನ ವೃತ್ತಾಂತ ಹೀಗಿದೆ:
ದೂರಿನಲ್ಲಿ ನಲಪಾಡ್ ಬೆದರಿಕೆ ಬಗ್ಗೆ ಸಂಪೂರ್ಣ ವಿವರ ಹಾಗೂ ಇತಿಹಾಸ ಉಲ್ಲೇಖಿಸಿರುವ ಭವ್ಯ ಶಾಸಕರಾದ ಹ್ಯಾರಿಸ್ ರವರ ಮಗ ಮೊಹಮ್ಮದ್ ನಲಪಾಡ್, ಭಾಸ್ಕರ್, ಗೋವರ್ಧನ್, ಆಗಸ್ಟಿನ್ ಹಾಗೂ ಇತರೆ 15 ಕ್ಕೂ ಹೆಚ್ಚು ಜನರ ವಿರುದ್ಧ ಕಂಪ್ಲೆಂಟ್ ನೀಡಿದ್ದಾರೆ.

ಯುವ ಕಾಂಗ್ರೆಸ್ ಕಚೇರಿಗೆ ಏಕಾಏಕಿಯಾಗಿ ಬಂದು ನನ್ನನ್ನು ಗುರಿಯಾಗಿಸಿಕೊಂಡು ಬೈಯ್ದು ಹೊಡೆಯುವ ಹಾಗೆ ಕೈ ತೋರಿಸಿದ್ದಾರೆ ಎಂದು‌ ಕಂಪ್ಲೆಂಟ್​ನಲ್ಲಿ ಉಲ್ಲೇಖ. ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ದೂರು.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು