ಮಂಡ್ಯ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ ಅಬ್ಬರಕ್ಕೆ ಮೈದಣಿಯ ಕುಣಿದ ಯುವಕರು, ಸಾಥ್ ನೀಡಿದ ಯುವತಿಯರು

Updated on: Apr 12, 2025 | 6:20 PM

ಬಿಗಿ ಪೊಲೀಸ್ ಬಂದೋಬಸ್ತ್​ನೊಂದಿಗೆ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ಸಾಗುತ್ತಿದೆ. ಶೋಭಾಯಾತ್ರೆಯಲ್ಲಿ ಪಾಲ್ಗೊಂಡವರ ದಾಹ ತಣಿಸಲು ರಸ್ತೆಗಳಲ್ಲಿ ನೀರು ಮತ್ತು ಶರಬತ್ತುಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ವರದಿಯಾಗಿರುವಂತೆ ಶ್ರೀರಾಮಾಂಜನೇಯ ಮಹೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಶೋಭಾಯಾತ್ರೆಯನ್ನು ಆಯೋಜಿಸಿವೆ.

ಮಂಡ್ಯ, ಏಪ್ರಿಲ್ 12: ನಗರದಲ್ಲಿ ಹಿಂದೂ ಸಂಘಟನೆಗಳು ಹನುಮ ಜಯಂತಿ (Hanuma Jayanti) ನಿಮಿತ್ತ ಆಯೋಜಿಸಿರುವ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ. ಡಿಜೆ ಸೌಂಡ್​​ನ ಅಬ್ಬರ ದೂದೂರದವರೆಗೆ ಕೇಳಿಸುತ್ತಿದೆ. ಉರಿಬಿಸಿಲಲ್ಲೂ ಡಿಜೆ ಮ್ಯೂಸಿಕ್​ಗೆ ಯುವಕರು ಮೈ ಮರೆತು ಕುಣಿಯುತ್ತಿದ್ದಾರೆ, ಅನೇಕರ ಕೈಗಳಲ್ಲಿ ಭಗ್ವಾಗಳಿವೆ. ಯುವಕರ ಕುಣಿತ ಮತ್ತು ಡಿಜೆ ಮ್ಯೂಸಿಕ್ ನಿಂದ ಪ್ರೇರಿತರಾಗಿರುವ ಮಹಿಳೆಯರು ಸಹ ಕುಣಿಯುತ್ತಿದ್ದಾರೆ. ಪ್ರತ್ಯೇಕವಾಗಿ ಕುಣಿಯುತ್ತಿದ ಮಹಿಳೆಯರಿಗೆ ಮುಂದೆ ಕರೆದು ಡ್ಯಾನ್ಸ್ ಮಾಡುವ ಅವಕಾಶ ಕಲ್ಪಿಸಲಾಗುತ್ತದೆ. ಯುವತಿಯರು ಯುವಕರಿಗೆ ಕಮ್ಮಿಯಿಲ್ಲದಂತೆ ಕುಣಿದರು.

ಇದನ್ನೂ ಓದಿ:  ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಜನಸಾಗರ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More