ಬೆಳಗಾವಿ: ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!

ಬೆಳಗಾವಿ: ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
|

Updated on:Jul 04, 2024 | 5:50 PM

ಮಳೆಗಾಲದಲ್ಲಿ ಜಲಪಾತಗಳ ಸನಿಹಕ್ಕೂ ಹೋಗಬಾರದು. ಮೇಲಿಂದ ನೀರು ರಭಸದಿಂದ ಕೆಳಕ್ಕೆ ಬೀಳುವುದರಿಂದ ಕಲ್ಲು ಬಂಡೆಗಳು ನುಣುಪಾಗಿರುತ್ತವೆ. ಕಾಲು ಜಾರುವ ಅಪಾಯವಂತೂ ಇದ್ದೇ ಇರುತ್ತದೆ. ಇದೇ ಕಾರಣಕ್ಕೆ ಅರಣ್ಯ ಇಲಾಖೆಯು ಎಚ್ಚರಿಕೆಯ ಬೋರ್ಡ್ ಗಳನ್ನು ಜಲಪಾತಗಳ ಬಳಿ ಅಳವಡಿಸಿರುತ್ತದೆ. ಆದರೆ ಅದನ್ನು ಗಮನಿಸುವ ಓದುವ ಮತ್ತು ಗ್ರಹಿಸಿಕೊಳ್ಳುವ ವ್ಯವಧಾನ ಯುವಕರಲ್ಲಿ ಇರಲ್ಲ.

ಬೆಳಗಾವಿ: ಈ ಜಲಪಾತವನ್ನು ನೋಡಿದರೆ ಪಿಬಿ ಶ್ರೀನಿವಾಸ್ ಮತ್ತು ಪಿ ಸುಶೀಲಾ ಹಾಡಿರುವ …ಧುಮ್ಮಿಕ್ಕಿ ಹರಿಯುವ ಜಲಧಾರೆಯಲ್ಲೂ ದುಂಬಿಯ ಹಾಡಿನ ಝೇಂಕಾರದಲ್ಲೂ….. ಹಾಡಿನ ಸಾಲುಗಳು ನೆನಪಾಗಬೇಕು. ಇದು ಪುಟ್ಟಣ ಕಣಗಾಲ್ ನಿರ್ದೇಶನದ ‘ಒಲವೇ ಜೀವನ ಸಾಕ್ಷಾತ್ಕಾರ’ ಚಿತ್ರ ಮತ್ತು ಆ ಜಮಾನಾದ ಸುಮಧುರ ಸೂಪರ್ ಹಿಟ್ ಹಾಡು. ಚಿತ್ರದ ಸನ್ನಿವೇಶ ಬೇರೆ ಇದೆ ಆ ವಿಚಾರ ಬೇರೆ. ಅಲ್ಲಿ ಜಲಪಾತ ನಮಗೆ ಕಾಣಲಾರದು, ನಾಯಕಿಯ ಕಣ್ಣೀರು ಕಾಣುತ್ತದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಗೋಡಚಿನಮಲ್ಕಿ ಜಲಪಾತ ನೋಡುವಾಗ ಈ ಹಾಡು ನೆನಪಾದರೆ ಆಶ್ಚರ್ಯವಿಲ್ಲ. ಅದರೆ ರಭಸದಿಂದ ಧುಮ್ಮುಕ್ಕುತ್ತಿರುವ ಜಲಪಾತದಲ್ಲಿ ಯುವಕನೊಬ್ಬ ಹುಚ್ಚು ಸಾಹಸಕ್ಕಿಳಿದಿದ್ದಾನೆ. ಮತ್ತೂ ಸೋಜಿಗದ ಸಂಗತಿಯೆಂದರೆ ಅವನು ಮೀನು ಹಿಡಿಯುವ ಉದ್ದೇಶದಿಂದ ಈ ಕಸರತ್ತು ಮಾಡುತ್ತಿದ್ದಾನೆ. ಹಿಡಿದ ಮೀನುಗಳನ್ನು ಅವನು ಬ್ಯಾಗೊಂದರಲ್ಲಿ ಹಾಕುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ. ಮೀನು ಹಿಡಿಯಲು ಅವನಿಗೆ ಯಾವುದೇ ಕೆರೆ, ಹಳ್ಳ-ಕೊಳ್ಳ ಸಿಗಲಿಲ್ಲವೇ? ಬಹಳ ಅಪಾಯಕಾರಿ ರಿಸ್ಕ್ ಯುವಕ ತೆಗೆದುಕೊಂಡಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Shocking Video: ಪಿಕ್ನಿಕ್ ಹೋದ ಒಂದೇ ಕುಟುಂಬದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

Published On - 2:32 pm, Thu, 4 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ