ಉದ್ಯೋಗ ಕೊಡಿಸಲು ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

Edited By:

Updated on: Nov 20, 2024 | 10:58 PM

ಉದ್ಯೋಗ ಕೊಡಿಸಲು ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶಿವಾಜಿ ಚೌಕ್ ಬಳಿ‌ ನಡೆದಿದೆ.

ಕಾರವಾರ, (ನವೆಂಬರ್ 20): ಉದ್ಯೋಗ ಕೊಡಿಸಲು ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾಜಿ ಚೌಕ್ ಬಳಿ‌ ನಡೆದಿದೆ. ಓರ್ವ ಮುಸ್ಲಿಂ ಯುವತಿಯನ್ನು ಕೆಲಸ ಕೊಡಿಸಲು ಶಿರಸಿ ರೋಟರಿ ಆಸ್ಪತ್ರಗೆ ಕರೆದುಕೊಂಡು ಬಂದಿದ್ದ ಶಿರಸಿ ತಾಲೂಕಿನ ಕೊರ್ಲಕಟ್ಟಾ ಗೌಡಕೊಪ್ಪದ ವೀರೇಂದ್ರ ಜೀನದತ್ತ ಜೈನ್ (21) ಮೇಲೆ ಶಕೀಲ್ ಅಹ್ಮದ್ (24), ಮಹಮ್ಮದ್ ಮಾಜ್ (26) ಹಾಗೂ ಶಿರಸಿ ಗೋಲಗೇರಿ ಓಣಿಯ ಉಬೇದ್ ಸವಣೂರ್ (25) ಹಲ್ಲೆ ನಡೆಸಿದ್ದಾರೆ.

ಚನ್ನಾಪುರ ನಿವಾಸಿ ಉಸ್ಮಾ ಬಾನು ಹಾಗೂ ವೀರೇಂದ್ರ ಜಿನದತ್ತ ಜೈನ್ ಹತ್ತಿರದ ಊರಿನವರಾಗಿದ್ದರಿಂದ ಇಬ್ಬರ ಪರಿಚಯವಿತ್ತು. ಉಸ್ಮಾ ಬಾನು ಈ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಮಾಡಿದ್ದು, ಬಳಿಕ ಬಿಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಆಕೆಗೆ ಉದ್ಯೋಗ ಕೊಡಿಸಲು ವೀರೇಂದ್ರ ಜಿನದತ್ತ ಜೈನ್, ತಾನು ಸೆಕ್ಯೂರಿಟಿ ಕೆಲಸ ಮಾಡ್ತಿದ್ದ ಆಸ್ಪತ್ರೆಗೆ ಇಂಟರ್‌ವ್ಯೂಗೆ ಕರೆದುಕೊಂಡು ಬಂದಿದ್ದಾನೆ. ಬಳಿಕ ಶಿವಾಜಿ ಚೌಕ ಬಳಿ ಐಸ್ ಕ್ರೀಂ ಅಂಗಡಿಯಲ್ಲಿ ಐಸ್ ಕ್ರೀಂ ತಿನ್ನುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿಗಳು, ಮುಸ್ಲಿಂ ಹುಡುಗಿಯನ್ನು ಪ್ರೀತಿ ಮಾಡುತ್ತೀಯಾ ಎಂದು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈಯ್ದು ಕಾಲಿನಿಂದ ತುಳಿದು, ಕಲ್ಲಿನಿಂದ ಬೆನ್ನಿಗೆ ಹೊಡಿದಿದ್ದಾರೆ. ಈ ಸಂಬಂಧ ಸಂಬಂಧ ಶಿರಸಿ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Loading...
Unable to load recommendations.
Follow Us