ನೆಲಮಂಗಲ: ಪಿಸ್ಟಲ್ ಹಿಡಿದು ಚಿನ್ನಾಭರಣ ಅಂಗಡಿಗೆ ನುಗ್ಗಿದ ಆಗುಂತಕರು ಏನನ್ನೂ ದೋಚದೆ ವಾಪಸ್ಸು ಹೋದರು!
ಕಪ್ಪುಬಟ್ಟೆ ಧರಿಸಿ ಇಬ್ಬರು ಯುವಕರ ಪೈಕಿ ಒಬ್ಬನ ಕೈಯಲ್ಲಿ ಪಿಸ್ಟಲ್ ಇದೆ. ಕಪ್ಪುವಸ್ತ್ರಧಾರಿಗಳು ನೇರವಾಗಿ ಅಂಗಡಿಯ ಮಾಲೀಕನ ಮೇಲೆ ಅಟ್ಯಾಕ್ ಮಾಡುವ ಪ್ರಯತ್ನ ಮಾಡುತ್ತಾರೆ. ಆದರೆ, ಮಾಲೀಕ ಹಿಂಬಾಗಿಲನ್ನು ಓಪನ್ ಮಾಡಿ ಒಳಗೋಡಿ ತಪ್ಪಿಸಿಕೊಳ್ಳುತ್ತಾನೆ. ಆಗ ಅಂಗಡಿಯಲ್ಲಿ ಯಾರೂ ಇಲ್ಲದಿದ್ದರೂ ಯುವಕರು ಏನನ್ನೂ ದೋಚದೆ ಅಲ್ಲಿಂದ ಪರಾರಿಯಾಗುತ್ತಾರೆ.
ನೆಲಮಂಗಲ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆಯೇ ಮತ್ತು ಕಳ್ಳಕಾಕರಿಗೆ ಕಾನೂನಿನ ಭಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆಯೇ ಎಂಬ ಶಂಕೆ ಈ ವಿಡಿಯೋ ನೋಡಿದ ನಂತರ ಎರಡು ಜಿಲ್ಲೆಗಳ ನಾಗರಿಕರನ್ನು ಕಾಡಿದರೆ ಆಶ್ಚರ್ಯವಿಲ್ಲ. ಬೆಳಗಿನ 9 ಗಂಟೆ ಸುಮಾರಿಗೆ ನಾಲ್ವರು ಯುವಕರು ಕೈಯಲ್ಲೊಂದು ಪಿಸ್ಟಲ್ (pistol) ಹಿಡಿದು ನೆಲಮಂಗಲದ (Nelamangala) ಭೈರವೇಶ್ವರ ಸರ್ಕಲ್ ನಲಲ್ಲಿರುವ ಒಂದು ಚಿನ್ನಾಭರಣಗಳ ಅಂಗಡಿಗೆ (jewelry shop) ನುಗ್ಗುತ್ತಾರೆ. ಮೊದಲಿಬ್ಬರು ಬರುತ್ತಾರೆ ಆಮೇಲೆ ಮತ್ತಿಬ್ಬರು. ಕಪ್ಪುಬಟ್ಟೆ ಧರಿಸಿ ಇಬ್ಬರು ಯುವಕರ ಪೈಕಿ ಒಬ್ಬನ ಕೈಯಲ್ಲಿ ಪಿಸ್ಟಲ್ ಇದೆ. ಕಪ್ಪುವಸ್ತ್ರಧಾರಿಗಳು ನೇರವಾಗಿ ಅಂಗಡಿಯ ಮಾಲೀಕನ ಮೇಲೆ ಅಟ್ಯಾಕ್ ಮಾಡುವ ಪ್ರಯತ್ನ ಮಾಡುತ್ತಾರೆ. ಆದರೆ, ಮಾಲೀಕ ಹಿಂಬಾಗಿಲನ್ನು ಓಪನ್ ಮಾಡಿ ಒಳಗೋಡಿ ತಪ್ಪಿಸಿಕೊಳ್ಳುತ್ತಾನೆ.
ಆಗ ಅಂಗಡಿಯಲ್ಲಿ ಯಾರೂ ಇಲ್ಲದಿದ್ದರೂ ಯುವಕರು ಏನನ್ನೂ ದೋಚದೆ ಅಲ್ಲಿಂದ ಪರಾರಿಯಾಗುತ್ತಾರೆ. ಕಳುವು ಅವರ ಉದ್ದೇಶವಾಗಿತ್ತೋ ಇಲ್ಲವೋ ಅಂತ ತನಿಖೆಯ ನಂತರ ಗೊತ್ತಾಗಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ. ಈ ಯುವಕರಲ್ಲಿ ಪಿಸ್ಟಲ್ ಹೇಗೆ ಬಂತು ಅಂತ ಪೊಲೀಸರೇ ಹೇಳಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
