Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ದಾರಿ ಬಿಡಿ ಅಂತ ಹಾರ್ನ್ ಮಾಡಿದ್ದಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ಕಾರಲ್ಲಿದ್ದ ಯುವಕರಿಂದ ಹಲ್ಲೆ

ಕಾರಿನಲ್ಲಿದ್ದರವರು ಸೈಡ್ ವ್ಯೂ ಮಿರರ್ ಗಳನ್ನು ಒಳಭಾಗಕ್ಕೆ ಎಳೆದುಕೊಂಡು ಮುಚ್ಚಿದ್ದರಿಂದ ಹಿಂದೆ ಬರುತ್ತಿದ್ದ ವಾಹನ ಅವರಿಗೆ ಕಾಣುವುದು ಸಾಧ್ಯವಿರಲಿಲ್ಲ. ಹಾಗಾಗೇ ಬಸ್ ಚಾಲಕ ಹಾರ್ನ್ ಮಾಡಿದ್ದಾರೆ. ಹಾರ್ನ್ ಶಬ್ದದಿಂದ ಕುಪಿತಗೊಂಡ ಕಾರಲ್ಲಿದ್ದವರು ಕೆಳಗಿಳಿದು ಬಸ್ ಡ್ರೈವರ್ ಬಳಿ ಹಲ್ಲೆ ನಡೆಸಿದ್ದಾರೆ ಮತ್ತು ಮನಸ್ಸಿಗೆ ಬಂದಂತೆ ಬೈದಾಡಿದ್ದಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 09, 2024 | 1:13 PM

ಗದಗ: ಇದು ದುರಹಂಕಾರಲ್ಲದೆ (arrogance) ಮತ್ತೇನೂ ಆಗಲಾರದು. ವಿಷಯ ಬಹಳ ಸಿಂಪಲ್ ಆಗಿದೆ, ಆದರೆ ಕಾರಲ್ಲಿದ್ದ ದುರುಳರು ಅದನ್ನು ದೊಡ್ಡದು ಮಾಡಿದ್ದಾರೆ. ಮೊಬೈಲ್ ವಿಡಿಯೋನಲ್ಲಿ ಸೆರೆಹಿಡಿದಿರುವ ದೃಶ್ಯಗಳ ಘಟನೆ, ಗದಗ ನಗರದ (Gadag city outskirts) ಹೊರವಲಯ ಅಸುಂಡಿಯಲ್ಲಿ ನಡೆದಿದೆ. ಗದಗನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ ಬಸ್ಸು ಅಸುಂಡಿ ಬಳಿ ಬಂದಾಗ ತನ್ನ ಮುಂದೆ ಹೋಗುತ್ತಿದ್ದ ಕಾರಿಗೆ ಸೈಡ್ ಬಿಡುವಂತೆ ಬಸ್ಸಿನ ಚಾಲಕ ಹಾರ್ನ್ ಮಾಡಿದ್ದಾರೆ. ಕಾರಿನಲ್ಲಿದ್ದರವರು ಸೈಡ್ ವ್ಯೂ ಮಿರರ್ ಗಳನ್ನು ಒಳಭಾಗಕ್ಕೆ ಎಳೆದುಕೊಂಡು ಮುಚ್ಚಿದ್ದರಿಂದ ಹಿಂದೆ ಬರುತ್ತಿದ್ದ ವಾಹನ ಅವರಿಗೆ ಕಾಣುವುದು ಸಾಧ್ಯವಿರಲಿಲ್ಲ. ಹಾಗಾಗೇ ಬಸ್ ಚಾಲಕ ಹಾರ್ನ್ ಮಾಡಿದ್ದಾರೆ. ಹಾರ್ನ್ ಶಬ್ದದಿಂದ ಕುಪಿತಗೊಂಡ ಕಾರಲ್ಲಿದ್ದವರು ಕೆಳಗಿಳಿದು ಬಸ್ ಡ್ರೈವರ್ ಬಳಿ ಹಲ್ಲೆ ನಡೆಸಿದ್ದಾರೆ ಮತ್ತು ಮನಸ್ಸಿಗೆ ಬಂದಂತೆ ಬೈದಾಡಿದ್ದಾರೆ. ಅವರ ಅವಾಚ್ಯ ಪದ ಬಳಕೆಯಿಂದ ಬಸ್ ಚಾಲಕನಿಗೂ ಸಿಟ್ಟು ಬಂದಿದೆ.

ಕ್ಯಾಬಿನ್ ನಿಂದ ಕೆಳಗಿಳಿದು ಯವಕರಿಗೆ ತಿರುಗೇಟು ನೀಡಬೇಕೆಂದಿದ್ದ ಅವರನ್ನು ಬಸ್ ನಲ್ಲಿದ್ದ ಮಹಿಳಾ ಪ್ರಯಾಣಿಕರು ತಡೆಯುತ್ತಾರೆ. ಡ್ರೈವರ್ ಹೆಸರು ಸಂತೋಷ್ ಎಂದು ಗೊತ್ತಾಗಿದ್ದು ಆವರ ಗಾಯಗಳಿಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕರ್ತವ್ಯನಿರತ ಒಬ್ಬ ಸರ್ಕಾರೀ ನೌಕರನ ಮೇಲೆ ಹಲ್ಲೆ ನಡೆಸಿರುವ ಯುವಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಅವರ ಮುಖ ಪರಿಚಯ ವಿಡಿಯೋದಲ್ಲಿ ಸಿಗುತ್ತದೆ ಮತ್ತು ಕಾರಿನ ನಂಬರ್ ರಸ್ತೆಬದಿಯ ಯಾವುದಾದರೂ ಸಿಸಿಟಿವಿಯಲ್ಲಿ ಸೆರೆಯಾಗಿರುತ್ತದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್