AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ದಾರಿ ಬಿಡಿ ಅಂತ ಹಾರ್ನ್ ಮಾಡಿದ್ದಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕನ ಮೇಲೆ ಕಾರಲ್ಲಿದ್ದ ಯುವಕರಿಂದ ಹಲ್ಲೆ

ಕಾರಿನಲ್ಲಿದ್ದರವರು ಸೈಡ್ ವ್ಯೂ ಮಿರರ್ ಗಳನ್ನು ಒಳಭಾಗಕ್ಕೆ ಎಳೆದುಕೊಂಡು ಮುಚ್ಚಿದ್ದರಿಂದ ಹಿಂದೆ ಬರುತ್ತಿದ್ದ ವಾಹನ ಅವರಿಗೆ ಕಾಣುವುದು ಸಾಧ್ಯವಿರಲಿಲ್ಲ. ಹಾಗಾಗೇ ಬಸ್ ಚಾಲಕ ಹಾರ್ನ್ ಮಾಡಿದ್ದಾರೆ. ಹಾರ್ನ್ ಶಬ್ದದಿಂದ ಕುಪಿತಗೊಂಡ ಕಾರಲ್ಲಿದ್ದವರು ಕೆಳಗಿಳಿದು ಬಸ್ ಡ್ರೈವರ್ ಬಳಿ ಹಲ್ಲೆ ನಡೆಸಿದ್ದಾರೆ ಮತ್ತು ಮನಸ್ಸಿಗೆ ಬಂದಂತೆ ಬೈದಾಡಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 09, 2024 | 1:13 PM

Share

ಗದಗ: ಇದು ದುರಹಂಕಾರಲ್ಲದೆ (arrogance) ಮತ್ತೇನೂ ಆಗಲಾರದು. ವಿಷಯ ಬಹಳ ಸಿಂಪಲ್ ಆಗಿದೆ, ಆದರೆ ಕಾರಲ್ಲಿದ್ದ ದುರುಳರು ಅದನ್ನು ದೊಡ್ಡದು ಮಾಡಿದ್ದಾರೆ. ಮೊಬೈಲ್ ವಿಡಿಯೋನಲ್ಲಿ ಸೆರೆಹಿಡಿದಿರುವ ದೃಶ್ಯಗಳ ಘಟನೆ, ಗದಗ ನಗರದ (Gadag city outskirts) ಹೊರವಲಯ ಅಸುಂಡಿಯಲ್ಲಿ ನಡೆದಿದೆ. ಗದಗನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ ಬಸ್ಸು ಅಸುಂಡಿ ಬಳಿ ಬಂದಾಗ ತನ್ನ ಮುಂದೆ ಹೋಗುತ್ತಿದ್ದ ಕಾರಿಗೆ ಸೈಡ್ ಬಿಡುವಂತೆ ಬಸ್ಸಿನ ಚಾಲಕ ಹಾರ್ನ್ ಮಾಡಿದ್ದಾರೆ. ಕಾರಿನಲ್ಲಿದ್ದರವರು ಸೈಡ್ ವ್ಯೂ ಮಿರರ್ ಗಳನ್ನು ಒಳಭಾಗಕ್ಕೆ ಎಳೆದುಕೊಂಡು ಮುಚ್ಚಿದ್ದರಿಂದ ಹಿಂದೆ ಬರುತ್ತಿದ್ದ ವಾಹನ ಅವರಿಗೆ ಕಾಣುವುದು ಸಾಧ್ಯವಿರಲಿಲ್ಲ. ಹಾಗಾಗೇ ಬಸ್ ಚಾಲಕ ಹಾರ್ನ್ ಮಾಡಿದ್ದಾರೆ. ಹಾರ್ನ್ ಶಬ್ದದಿಂದ ಕುಪಿತಗೊಂಡ ಕಾರಲ್ಲಿದ್ದವರು ಕೆಳಗಿಳಿದು ಬಸ್ ಡ್ರೈವರ್ ಬಳಿ ಹಲ್ಲೆ ನಡೆಸಿದ್ದಾರೆ ಮತ್ತು ಮನಸ್ಸಿಗೆ ಬಂದಂತೆ ಬೈದಾಡಿದ್ದಾರೆ. ಅವರ ಅವಾಚ್ಯ ಪದ ಬಳಕೆಯಿಂದ ಬಸ್ ಚಾಲಕನಿಗೂ ಸಿಟ್ಟು ಬಂದಿದೆ.

ಕ್ಯಾಬಿನ್ ನಿಂದ ಕೆಳಗಿಳಿದು ಯವಕರಿಗೆ ತಿರುಗೇಟು ನೀಡಬೇಕೆಂದಿದ್ದ ಅವರನ್ನು ಬಸ್ ನಲ್ಲಿದ್ದ ಮಹಿಳಾ ಪ್ರಯಾಣಿಕರು ತಡೆಯುತ್ತಾರೆ. ಡ್ರೈವರ್ ಹೆಸರು ಸಂತೋಷ್ ಎಂದು ಗೊತ್ತಾಗಿದ್ದು ಆವರ ಗಾಯಗಳಿಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕರ್ತವ್ಯನಿರತ ಒಬ್ಬ ಸರ್ಕಾರೀ ನೌಕರನ ಮೇಲೆ ಹಲ್ಲೆ ನಡೆಸಿರುವ ಯುವಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಅವರ ಮುಖ ಪರಿಚಯ ವಿಡಿಯೋದಲ್ಲಿ ಸಿಗುತ್ತದೆ ಮತ್ತು ಕಾರಿನ ನಂಬರ್ ರಸ್ತೆಬದಿಯ ಯಾವುದಾದರೂ ಸಿಸಿಟಿವಿಯಲ್ಲಿ ಸೆರೆಯಾಗಿರುತ್ತದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ