Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 01, 2023 | 5:30 PM

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ