ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us