AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್

ಮದನ್​ ಕುಮಾರ್​
|

Updated on: Apr 18, 2025 | 11:01 PM

‘ಯುದ್ಧಕಾಂಡ’ ಸಿನಿಮಾಗೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಚಿತ್ರಕ್ಕೆ ಅಜಯ್ ರಾವ್ ಅವರು ಬಂಡವಾಳ ಹೂಡಿದ್ದಾರೆ. ಅಲ್ಲದೇ, ಮುಖ್ಯ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಅಜಯ್ ರಾವ್ ಕಾರು ಮಾರುವಾಗ ಅವರ ಪುತ್ರಿ ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಅಜಯ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಏಪ್ರಿಲ್ 18ರಂದು ಬಿಡುಗಡೆ ಆದ ‘ಯುದ್ಧಕಾಂಡ’ (Yuddhakaanda) ಚಿತ್ರಕ್ಕೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾಗೆ ಅಜಯ್ ರಾವ್ (Ajay Rao) ಅವರೇ ಬಂಡವಾಳ ಹೂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಕೂಡ ಅವರು ಅಭಿನಯಿಸಿದ್ದಾರೆ. ಸಿನಿಮಾಗಾಗಿ ಅಜಯ್ ರಾವ್ ಕಾರು ಮಾರುವಾಗ ಅವರ ಮಗಳು (Ajay Rao Daughter) ಕಣ್ಣೀರು ಹಾಕಿದ್ದ ವಿಡಿಯೋ ವೈರಲ್ ಆಗಿದೆ. ಆ ಕುರಿತು ಅಜಯ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ರೀತಿ ಪ್ರಚಾರ ನನಗೆ ಬೇಡ. ಸೆಂಟಿಮೆಂಟ್​ನಿಂದ ನಮ್ಮ ಸಿನಿಮಾ ಗೆಲ್ತು ಎಂಬ ಮಾತು ಬರುವುದು ಬೇಡ. ಅದು ನನಗೆ ಬೇಡ’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.