ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

Updated on: Sep 30, 2023 | 8:38 AM

ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿತ್ತು. ಈ ಬಂದ್ ಯಶಸ್ವಿ ಆಗಿದೆ. ಈ ಬಂದ್​ಗೆ ಚಿತ್ರರಂಗದವರೂ ಬೆಂಬಲ ನೀಡಿದ್ದರು. ಮೈಸೂರಿನಲ್ಲಿ ಯುವ ರಾಜ್​ಕುಮಾರ್ ಸಿನಿಮಾ ತಂಡದವರು ಶೂಟಿಂಗ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಇದಕ್ಕೆ ಯುವ ರಾಜ್​ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿತ್ತು. ಈ ಬಂದ್ ಯಶಸ್ವಿ ಆಗಿದೆ. ಈ ಬಂದ್​ಗೆ ಚಿತ್ರರಂಗದವರೂ ಬೆಂಬಲ ನೀಡಿದ್ದರು. ಹೀಗಾಗಿ ಎಲ್ಲಿಯೂ ಚಿತ್ರೀಕರಣ ನಡೆದಿಲ್ಲ. ಸಿನಿಮಾ ಪ್ರದರ್ಶನ ಕೂಡ ರದ್ದಾಗಿತ್ತು. ಆದರೆ, ಮೈಸೂರಿನಲ್ಲಿ ಯುವ ರಾಜ್​ಕುಮಾರ್ ಸಿನಿಮಾ ತಂಡದವರು ಶೂಟಿಂಗ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಇದಕ್ಕೆ ಯುವ ರಾಜ್​ಕುಮಾರ್ (Yuva Rajkumar) ಸ್ಪಷ್ಟನೆ ನೀಡಿದ್ದಾರೆ. ‘ಹೋರಾಟಕ್ಕೆ ಸಂಪೂರ್ಣ ಬೆಂಬಲ ಇದೆ. ಸೆಪ್ಟೆಂಬರ್ 28ರಂದು ಶೂಟಿಂಗ್ ಮಾಡುವಾಗ ಲೈಟ್ ಸುಟ್ಟೋಗಿತ್ತು. ಅದನ್ನು ನೋಡೋಕೆ ಬಂದಿದ್ವಿ ಅಷ್ಟೇ’ ಎಂದು ಯುವ ರಾಜ್​ಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More