ಸಖತ್ತಾಗಿದೆ: ‘ಏಳುಮಲೆ’ ನೋಡಿ ಯುವ ರಾಜ್​​ಕುಮಾರ್ ಹೇಳಿದ ಮೊದಲ ಮಾತು

Updated on: Sep 08, 2025 | 9:26 PM

ಪ್ರಿಯಾಂಕಾ ಆಚಾರ್, ರಾಣಾ, ಕಿಶೋರ್ ಮುಂತಾದವರು ನಟಿಸಿದ ‘ಏಳುಮಲೆ’ ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದೆ. ಸಾಮಾನ್ಯ ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಈ ಸಿನಿಮಾ ಬಹಳ ಇಷ್ಟವಾಗಿದೆ. ಇತ್ತೀಚೆಗೆ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ನಟ ಯುವ ರಾಜ್​​ಕುಮಾರ್ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡರು.

ರಾಣಾ, ಪ್ರಿಯಾಂಕಾ ಆಚಾರ್ ಅವರು ಜೋಡಿಯಾಗಿ ನಟಿಸಿದ ‘ಏಳುಮಲೆ’ (Elumale) ಸಿನಿಮಾಗೆ ಜನರಿಂದ ಉತ್ತಮ ವಿಮರ್ಶೆ ಸಿಕ್ಕಿದೆ. ಸಾಮಾನ್ಯ ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳೂ ಈ ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಇತ್ತೀಚೆಗೆ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಯುವ ರಾಜ್​​ಕುಮಾರ್ (Yuva Rajkumar) ಅವರು ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡರು. ‘ಸಿನಿಮಾ ಸಖತ್ತಾಗಿದೆ. ಚಿತ್ರಕಥೆ ತುಂಬ ನೀಟಾಗಿದೆ. ಪ್ರೇಕ್ಷಕರನ್ನು ಈ ಸಿನಿಮಾ ಕೂರಿಸುತ್ತದೆ. ಪ್ರತಿ ಸೆಕೆಂಡ್ ಕೂಡ ಮುಂದೇನಾಗುತ್ತದೆ ಅಂತ ಕಾಯುತ್ತೇವೆ. ಪ್ರೀತಿಯೇ ಪರಮಶ್ರೇಷ್ಠ ಎಂಬುದನ್ನು ಈ ಸಿನಿಮಾ ಮೂಲಕ ತುಂಬಾ ಚೆನ್ನಾಗಿ ತೋರಿಸಿದ್ದಾರೆ. ರಾಣಾ ಮತ್ತು ಪ್ರಿಯಾಂಕಾ ಆಚಾರ್ (Priyanka Achar) ಅವರು ತುಂಬ ಚೆನ್ನಾಗಿ ನಟಿಸಿದ್ದಾರೆ. ರಿಯಲ್ ಲೈಫ್ ಘಟನೆಯ ಹಿನ್ನೆಲೆಯಲ್ಲಿ ಲವ್ ಸ್ಟೋರಿ ತೋರಿಸಿರುವುದು ನನಗೆ ಇಷ್ಟ ಆಯಿತು. ಸಿನಿಮಾ ನೋಡಿ ತೃಪ್ತಿ ಆಯಿತು’ ಎಂದು ಯುವ ರಾಜ್​ಕುಮಾರ್ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More