ಹುಬ್ಬಳ್ಳಿಯಲ್ಲಿ ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ ಸಚಿವ ಜಮೀರ್ ಅಹ್ಮದ್ ಖಾನ್

Updated on: Nov 07, 2024 | 10:17 AM

ರೈತರು ನಮ್ಮ ಅನ್ನದಾತರು, ಅವರಿಗೆ ಯಾವುದೇ ಕಾರಣಕ್ಕೆ ತೊಂದರೆ ಕೊಡಲ್ಲ, ಅವರಿಗೆ ನೋಟೀಸ್​ಗಳು ಜಾರಿಯಾಗಿದ್ದರೆ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್​ ಸಚಿವನಾಗಿ ತಾನು ಹಲವಾರು ಬಾರಿ ಸ್ಪಷ್ಟಪಡಿಸಿದ್ದೇವೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.

ಹುಬ್ಬಳ್ಳಿ: ವಕ್ಫ್ ಮತ್ತು ವಸತಿ ಸಚಿವ ಬಿಜೆಡ್​ ಜಮೀರ್ ಅಹ್ಮದ್ ಖಾನ್ ಅವರು ನಿನ್ನೆ ಸಾಯಂಕಾಲ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಸಭೆ ನಡೆಸಿದ್ದು ಕುತೂಹಲ ಕೆರಳಿಸಿದೆ. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ, ಇದೇ ತಿಂಗಳು 19ರಂದು ರಾಜ್ಯ ವಕ್ಫ್​ ಬೋರ್ಡ್​ಗೆ ಚುನಾವಣೆ ನಡೆಯಲಿದೆ, ಅದೇ ಹಿನ್ನೆಲೆಯಲ್ಲಿ ಬೋರ್ಡಿನ ಸದಸ್ಯರೊಂದಿಗೆ ಸಭೆ ನಡೆಸಿದ್ದು, ರೈತರಿಗೆ ನೋಟೀಸ್ ಮತ್ತು ಮೀಟಿಂಗ್ ನಡುವೆ ಯಾವುದೇ ಸಂಬಂಧವಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಳೆಯ ದೋಸ್ತಿ ಜಮೀರ್ ಆಹ್ಮದ್ ಖಾನ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್ ಡಿ ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More