‘ನನಗೆ ಅದು ಸಂಬಂಧ ಇಲ್ಲ’: ದರ್ಶನ್ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್ ನೇರ ಮಾತು
ನಟ ದರ್ಶನ್ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ನಡುವೆ ಉತ್ತಮ ಒಡನಾಟ ಇದೇ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈಗ ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡಿದ ಬಗ್ಗೆ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ. ಆದ್ದರಿಂದಲೇ ದರ್ಶನ್ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಯ್ತಾ ಎಂಬ ಪ್ರಶ್ನೆಗೆ ಜಮೀರ್ ಉತ್ತರಿಸಿದ್ದಾರೆ. ‘ನನಗೆ ಅದು ಸಂಬಂಧ ಇಲ್ಲ. ಪೊಲೀಸ್ ಇಲಾಖೆ ತೀಮಾನದಿಂದ ಬಳ್ಳಾರಿಗೆ ಶಿಫ್ಟ್ ಮಾಡಿದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವ ಮಾತ್ರ. ನಾನು ಡಿಜಿ ಅಲ್ಲ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us