AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ರಾಜೇಶ್ ದುಗ್ಗುಮನೆ
|

Updated on: Jun 08, 2026 | 8:29 AM

Share

ದಿವಂಗತ ನಿರ್ಮಾಪಕ ದಿಲೀಪ್ ರಾಜ್ ನೆನಪಿನಲ್ಲಿ ಜೀ ಕನ್ನಡದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ‘ಪಾರು’ ಧಾರಾವಾಹಿಯ ಕಲಾವಿದರು ಭಾಗವಹಿಸಿ, ತಮಗೆ ನಟನಾ ಅವಕಾಶ ನೀಡಿ ಬೆಳೆಸಿದ ದಿಲೀಪ್ ರಾಜ್ ಅವರ ಮಾರ್ಗದರ್ಶನ ಮತ್ತು ಪ್ರೀತಿಯನ್ನು ಕಣ್ಣೀರಿನೊಂದಿಗೆ ನೆನಪಿಸಿಕೊಂಡರು. ಈ ಭಾವನಾತ್ಮಕ ಕ್ಷಣಗಳು ಇಡೀ ವೇದಿಕೆಯನ್ನು ಭಾವುಕಗೊಳಿಸಿದವು.

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ’ ವೇದಿಕೆಯಲ್ಲಿ ಅಗಲಿದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‘ಪಾರು’ ಧಾರಾವಾಹಿಯ ಮುಖ್ಯ ನಟಿ ಮೋಕ್ಷಿತಾ ಪೈ ಮತ್ತು ನಟ ಶರತ್, ದಿಲೀಪ್ ರಾಜ್ ತಮಗೆ ನೀಡಿದ ಬೆಂಬಲವನ್ನು ನೆನೆದು ಕಣ್ಣೀರಿಟ್ಟರು. ‘ಆರಂಭದ ದಿನಗಳಲ್ಲಿ ಶೂಟಿಂಗ್ ಕಷ್ಟವೆನಿಸಿದಾಗ ದಿಲೀಪ್ ಸರ್ ಮತ್ತು ವಿದ್ಯಾ ಮ್ಯಾಮ್ ತಮಗೆ ಧೈರ್ಯ ತುಂಬಿ, ನಟನೆಯನ್ನು ಪ್ರತಿಯೊಂದು ಹಂತದಲ್ಲೂ ಹೇಳಿಕೊಟ್ಟು ಬೆಳೆಸಿದರು ಎಂದು’ ಮೋಕ್ಷಿತಾ ಭಾವುಕರಾಗಿ ನುಡಿದರು. ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಕಿರುತೆರೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಅಗಲಿಕೆಯ ನೋವು ಇಡೀ ವೇದಿಕೆಯನ್ನು ಮೌನವಾಗಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us