AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಹವಾಮಾನ ಮುನ್ಸೂಚನೆ

ಬೆಂಗಳೂರು ಹವಾಮಾನದ ಸ್ಥಿತಿ

ಬೆಂಗಳೂರು ಹವಾಮಾನದ ಸ್ಥಿತಿ

ಪ್ರಸ್ತುತ ತಾಪಮಾನದ ಮಟ್ಟ
ಬೆಂಗಳೂರು ಹವಾಮಾನದ ಸ್ಥಿತಿ

22°C

ಆನಂದದಾಯಕ

ಭಾಗಶಃ ಮೋಡ

ಅನುಭವವಾಗುವ ತಾಪಮಾನ 24° C ಆರ್ದ್ರತೆ 83%
ಬೆಂಗಳೂರು ಹವಾಮಾನದ ಸ್ಥಿತಿ
ಕೊನೆಯ ನವೀಕರಣ: 2026-07-25 01:00 (ಸ್ಥಳೀಯ ಸಮಯ)

ಭಾರತದ ಅತ್ಯಂತ ಬಿಸಿಯಾದ ನಗರಗಳು

ಕ್ರಮಾಂಕ ನಗರ ತಾಪಮಾನ ಸ್ಥಿತಿ ಹವಾಮಾನದ ಸ್ಥಿತಿ
1 ಬಿಕಾನೇರ್ 33°C ಬಿಸಿ Weather Conditionsಭಾಗಶಃ ಮೋಡ
2 ಜೈಸಲ್ಮೇರ್ 33°C ಬಿಸಿ Weather Conditionsಭಾಗಶಃ ಮೋಡ
3 ಫಲೋಡಿ 33°C ಬಿಸಿ Weather Conditionsಮೋಡಾವೃತ
4 ಗಂಗಾನಗರ 32°C ಬಿಸಿ Weather Conditionsಕೆಲವೆಡೆ ಮಳೆಯ ಸಾಧ್ಯತೆ
5 ಶ್ರೀ ಗಂಗಾನಗರ 32°C ಬಿಸಿ Weather Conditionsಕೆಲವೆಡೆ ಮಳೆಯ ಸಾಧ್ಯತೆ
6 ಸಿರ್ಸಾ 32°C ಬಿಸಿ Weather Conditionsಸ್ಪಷ್ಟ ಆಕಾಶ
7 ಕವಲಿ 31°C ಬಿಸಿ Weather Conditionsಸ್ಪಷ್ಟ ಆಕಾಶ
8 ನೆಲ್ಲೂರು 31°C ಬಿಸಿ Weather Conditionsಭಾಗಶಃ ಮೋಡ
9 ಕಂದುಕೂರ್ 31°C ಬಿಸಿ Weather Conditionsಸ್ಪಷ್ಟ ಆಕಾಶ
10 ಫತೇಹಾಬಾದ್ 31°C ಬಿಸಿ Weather Conditionsಸ್ಪಷ್ಟ ಆಕಾಶ
ಕೊನೆಯ ನವೀಕರಣ: 2026-07-25 01:00 (ಸ್ಥಳೀಯ ಸಮಯ)
ಕ್ರಮಾಂಕ ನಗರ ತಾಪಮಾನ ಸ್ಥಿತಿ ಹವಾಮಾನದ ಸ್ಥಿತಿ
1 ಮನಾಲಿ 9°C Chilly Weather Conditionsಕೆಲವೆಡೆ ಮಳೆಯ ಸಾಧ್ಯತೆ
2 ಬಂಡಿಪೋರಾ 13°C ತಂಪು Weather Conditionsಕೆಲವೆಡೆ ಮಳೆಯ ಸಾಧ್ಯತೆ
3 ಹಂದ್ವಾರ 13°C ತಂಪು Weather Conditionsಕೆಲವೆಡೆ ಮಳೆಯ ಸಾಧ್ಯತೆ
4 ಸೋಪೋರ್ 13°C ತಂಪು Weather Conditionsಕೆಲವೆಡೆ ಮಳೆಯ ಸಾಧ್ಯತೆ
5 ಶ್ರೀನಗರ 14°C ತಂಪು Weather Conditionsಸ್ಪಷ್ಟ ಆಕಾಶ
6 ಶಂಶಿ 14°C ತಂಪು Weather Conditionsಮೋಡಾವೃತ
7 ಕುಲ್ಗಾಮ್ 14°C ತಂಪು Weather ConditionsSmoky Haze
8 ಗ್ಯಾಂಗ್ಟಾಕ್ 15°C ತಂಪು Weather Conditionsಭಾಗಶಃ ಮೋಡ
9 ಧರ್ಮಶಾಲಾ 17°C ತಂಪು Weather Conditionsಭಾಗಶಃ ಮೋಡ
10 ಕಿಲ್ಕುಂದ 17°C ತಂಪು Weather Conditionsಭಾಗಶಃ ಮೋಡ
ಕೊನೆಯ ನವೀಕರಣ: 2026-07-25 01:00 (ಸ್ಥಳೀಯ ಸಮಯ)

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 24: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ

ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಜುಲೈ 23: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ 100 ಟಿಎಂಸಿ ದಾಟಿದೆ. ಇನ್ನೂ ಕೆಲ ದಿನ ಇದೇ ಪ್ರಮಾಣದ ಒಳಹರಿವು ಮುಂದುವರಿದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

Karnataka Weather Forecast: ಮತ್ತೆ ಮುಂಗಾರು ಚುರುಕು; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 23: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IND vs ZIM: ಭಾರತ- ಜಿಂಬಾಬ್ವೆ ಪಂದ್ಯಕ್ಕೆ ಮಳೆ ಅಡ್ಡಿ? ಹರಾರೆ ಪಿಚ್ ಯಾರಿಗೆ ಸಹಕಾರಿ?

India vs Zimbabwe T20: ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ T20 ಸರಣಿ ಜುಲೈ 23 ರಂದು ಹರಾರೆಯಲ್ಲಿ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡ ಗೆಲುವಿನ ಹಾದಿಗೆ ಮರಳಲು ಸಜ್ಜಾಗಿದೆ. ಮೊದಲ ಪಂದ್ಯಕ್ಕೆ ಹರಾರೆಯ ಹವಾಮಾನ ಉತ್ತಮವಾಗಿದ್ದು, ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಸ್ಕೋರ್ 160-170 ನಿರೀಕ್ಷಿಸಲಾಗಿದೆ. ಸರಣಿಯ ಸಂಪೂರ್ಣ ವೇಳಾಪಟ್ಟಿ, ತಂಡಗಳ ಮುಖಾಮುಖಿ ದಾಖಲೆಗಳ ವಿವರ ಇಲ್ಲಿದೆ.

Karnataka Dam Water Level: ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ

ಕರ್ನಾಟಕದ ಜಲಾಶಯಗಳ ಜುಲೈ 22 ರ ನೀರಿನ ಮಟ್ಟ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿರುವ ಪರಿಣಾಮ ಕೃಷ್ಣಾ ನದಿಯ ಒಳಹರಿವು ಏರಿಕೆಯಾಗಿದೆ. ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳ ಕಂಡಿದ್ದರೂ, ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಇನ್ನೂ 100 ಅಡಿ ದಾಟಿಲ್ಲ.

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ

ಕರ್ನಾಟಕ ಹವಾಮಾನ ಜುಲೈ 22: ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನಲ್ಲಿ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ

Karnataka Weather: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡದ ನಗರಬಸ್ತಿಕೇರಿಯಲ್ಲಿ ನಿನ್ನೆ ಗರಿಷ್ಠ 121 ಮಿ.ಮೀ. ಮಳೆಯಾಗಿದೆ. ಮಹಾರಾಷ್ಟ್ರದ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ ಉಂಟಾಗಿದ್ದು, ನಾಳೆ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ವಾತಾವರಣ ಹೇಗಿರಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ ಏನು? ಎಂಬಿತ್ಯಾದಿ ಮಾಹಿತಿ ಇಲ್ಲಿವೆ.

Karnataka Weather Forecast: ಕರ್ನಾಟಕ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಗಾಳಿಯ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 21: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಉತ್ತರಾಖಂಡ ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸುತ್ತಿದೆ. ಇದರಿಂದಾಗಿ ರಸ್ತೆಗಳು ಅತ್ಯಂತ ಅಪಾಯಕಾರಿ ಸ್ಥಿತಿ ತಲುಪಿವೆ. ಈ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ವಾರ್ಷಿಕ ತೀರ್ಥಯಾತ್ರೆಗಳಲ್ಲಿ ಒಂದಾದ 'ಚಾರ್ ಧಾಮ್ ಯಾತ್ರೆ'ಯ ಭಕ್ತರ ಸುರಕ್ಷತೆಯ ಹಿತದೃಷ್ಟಿಯಿಂದ ಉತ್ತರಾಖಂಡ ಸರ್ಕಾರವು ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಯಾತ್ರಾ ಮಾರ್ಗಗಳು ಸುರಕ್ಷಿತ ಎಂದು ಘೋಷಿಸುವವರೆಗೆ ಕೇದಾರ್‌ನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಕಡೆಗೆ ಭಕ್ತರು ತೆರಳದಂತೆ ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

Karnataka Weather Update: ಬೆಂಗಳೂರಿಗರಿಗೆ ತಂಪೆರೆದ ವರುಣ, ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​

Monsoon 2026: ಬೆಂಗಳೂರಿನ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ನಡುವೆ ಹವಾಮಾನ ಇಲಾಖೆಯು ನಾಳೆ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಅರ್ಧ ಕರ್ನಾಟಕಕ್ಕೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳುವಿನಲ್ಲಿ ನಿನ್ನೆ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 160.5 ಮಿ.ಮೀ. ಮಳೆಯಾಗಿದೆ.

Karnataka Dam Water Level: ಇನ್ನೂ 100 ಅಡಿ ದಾಟಿಲ್ಲ KRS, ಆಲಮಟ್ಟಿಗೆ ಒಳಹರಿವು ಹೆಚ್ಚಳ; ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ

ಕರ್ನಾಟಕದ ಜಲಾಶಯಗಳ ಜುಲೈ 20 ರ ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇನ್ನೂ ನಿರೀಕ್ಷಿತ ಪ್ರಮಾಣಕ್ಕೆ ಏರಿಲ್ಲ. ಬೆಂಗಳೂರಿನ ಕುಡಿಯುವ ನೀರಿನ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯ ಜುಲೈ ಅಂತ್ಯ ಸಮೀಪಿಸಿದ್ದರೂ 100 ಅಡಿ ಗಡಿ ದಾಟಿಲ್ಲ. ಆಲಮಟ್ಟಿಗೆ ಒಳಹರಿವು ಹೆಚ್ಚಳವಾಗಿದ್ದರೆ, ಕಬಿನಿ ಮತ್ತು ತುಂಗಭದ್ರಾದಲ್ಲಿ ಸಂಗ್ರಹ ಕಡಿಮೆಯೇ ಇದೆ.

Karnataka Weather Forecast: ಕರಾವಳಿ ಕರ್ನಾಟಕ, ಒಳನಾಡಿನಲ್ಲಿ ಗಾಳಿ ಸಹಿತ ಮಳೆ; ಐಎಂಡಿ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 20: ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ಜುಲೈ 20 ಮತ್ತು 21ರಂದು ಕರಾವಳಿ ಕರ್ನಾಟಕದಲ್ಲಿ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.