ಅತ್ಯಂತ ಜನಪ್ರಿಯ ನಗರಗಳ ಹವಾಮಾನ
ಭಾರತದ ಅತ್ಯಂತ ಬಿಸಿಯಾದ ನಗರಗಳು
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಸಂಗ್ರೂರ್ | 42°C | Extreme Hot | |
| 2 | ಸಿವಾನ್ | 41°C | Extreme Hot | |
| 3 | ಇಟಾವಾ | 40°C | ಬಿಸಿ | |
| 4 | ಬಕ್ಸರ್ | 40°C | ಬಿಸಿ | |
| 5 | ಅರ್ರಾಹ್ | 40°C | ಬಿಸಿ | |
| 6 | ಗಂಗಾನಗರ | 40°C | ಬಿಸಿ | |
| 7 | ಖೈರಾಬಾದ್ | 40°C | ಬಿಸಿ | |
| 8 | ಬುಡೌನ್ | 40°C | ಬಿಸಿ | |
| 9 | ಅಜಂಗಢ | 40°C | ಬಿಸಿ | |
| 10 | ಜಾನ್ಪುರ್ | 39°C | ಬಿಸಿ |
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮನಾಲಿ | 7°C | Chilly | |
| 2 | ಗ್ಯಾಂಗ್ಟಾಕ್ | 13°C | ತಂಪು | |
| 3 | ಶಂಶಿ | 14°C | ತಂಪು | |
| 4 | ಬಂಡಿಪೋರಾ | 15°C | ತಂಪು | |
| 5 | ಹಂದ್ವಾರ | 15°C | ತಂಪು | |
| 6 | ಬಾರಾಮುಲ್ಲಾ | 15°C | ತಂಪು | |
| 7 | ಸೋಪೋರ್ | 15°C | ತಂಪು | |
| 8 | ಕುಲ್ಗಾಮ್ | 18°C | ತಂಪು | |
| 9 | ಕಿಲ್ಕುಂದ | 18°C | ತಂಪು | |
| 10 | ಮುದುಮಲೈ | 18°C | ತಂಪು |
Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ
Monsoon 2026: ಕರ್ನಾಟಕದಲ್ಲಿ ಜುಲೈ 1 ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಜೂನ್ 29 ರಂದು ಕರಾವಳಿ ಹಾಗೂ ಮಲೆನಾಡಿನ 6 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿಯೂ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದ್ದು, ವಾತಾವರಣ ಸಂಬಂಧಿತ ಮಾಹಿತಿ ಇಲ್ಲಿದೆ.
- Prasanna Hegde
- Updated on: Jun 25, 2026
- 5:38 pm
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ಮರುಪಾವತಿಗೆ ಆದೇಶ, ಪ್ರಕ್ರಿಯೆ ಹೇಗೆ?
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದೊಡ್ಡ ಸಿಹಿಸುದ್ದಿ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ 'ಉಚಿತ ಬಸ್ ಪಾಸ್' ವಿತರಿಸಲು ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇದೀಗ ವಿದ್ಯಾರ್ಥಿ ಬಸ್ ಪಾಸ್ ಹಣ ಮರುಪಾವತಿಗೆ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ, ಹಣ ಮರುಪಾವತಿ ಪ್ರಕ್ರಿಯೆ ಹೇಗೆ ಎನ್ನುವ ವಿವರ ಇಲ್ಲಿದೆ.
- Kiran Surya
- Updated on: Jun 24, 2026
- 9:17 pm
Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷೆ
Monsoon 2026: ಕರ್ನಾಟಕದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ಶುಕ್ರವಾರ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಜೂನ್ 30 ರವರೆಗೆ ಮಲೆನಾಡು ಹಾಗೂ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಾತ್ರ ವರ್ಷಧಾರೆ ನಿರೀಕ್ಷಿಸಲಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Jun 24, 2026
- 5:58 pm
Karnataka Weather Forecast: ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್!
Monsoon 2026: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಕೆಲವು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ‘ಯೆಲ್ಲೋ ಅಲರ್ಟ್’ ಜಾರಿಯಲ್ಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ.
- Bhavana Hegde
- Updated on: Jun 24, 2026
- 7:34 am
Karnataka Weather Forecast: ಕರಾವಳಿಯಲ್ಲಿ ನಾಳೆ ಮಳೆಯಬ್ಬರ, ಈ ಜಿಲ್ಲೆಗಳಲ್ಲಿಯೂ ವರ್ಷಧಾರೆಯ ನಿರೀಕ್ಷೆ
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ತುಸು ಬಿರುಸು ಪಡೆದಿದ್ದು, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿಯ ಹಲವೆಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಜೂನ್ 28ರವರೆಗೆ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಬಗ್ಗೆ ಇಲಾಖೆ ಅಂದಾಜಿಸಿದೆ.
- Prasanna Hegde
- Updated on: Jun 23, 2026
- 6:32 pm
Karnataka Weather Forecast: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ವರುಣನ ಆರ್ಭಟ! ಕರಾವಳಿಗೆ ಯೆಲ್ಲೋ ಅಲರ್ಟ್
Monsoon 2026: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು, ಮೈಸೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
- Bhavana Hegde
- Updated on: Jun 23, 2026
- 7:24 am
Karnataka Weather Forecast: ಜೂ.28ರ ವರೆಗೂ ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ
Monsoon 2026: ಜೂನ್ 28ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ವರುಣಾರ್ಭಟ ಹಾಗೂ ಉತ್ತರ ಒಳನಾಡಿನಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿಯೂ ಮಳೆಯ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯ ಆಗಮನದ ಬಗ್ಗೆ ಎಚ್ಚರಿಸಲಾಗಿದೆ.
- Prasanna Hegde
- Updated on: Jun 22, 2026
- 4:43 pm
Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ವರುಣನ ಆರ್ಭಟ! ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಬೆಳಗಾವಿ ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
- Bhavana Hegde
- Updated on: Jun 22, 2026
- 7:20 am
Karnataka Weather Forecast: ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣನ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
- Bhavana Hegde
- Updated on: Jun 21, 2026
- 7:47 am
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು, ಲೈಟ್ ಹಾಕಿಕೊಂಡು ಚಲಿಸಿದ ವಾಹನ ಚಾಲಕರು
ಬೆಂಗಳೂರು ಮಾತ್ರವಲ್ಲ ದೇಶದಲ್ಲೂ ಸಹ ಈ ಬಾರಿ ವಾಡಿಕೆಗಿಂತ ಮಳೆಯಾಗಿಲ್ಲ. ಆದರೂ ಇಂದು (ಜೂನ್ 20) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ ಕೃಪೆತೋರಿದ್ದಾನೆ. ಆದ್ರೆ, ಬಂದ ಸಣ್ಣ ಹನಿಯ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಹೌದು...ಸಂಜೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಯ್ತು. ನೀರು ಹೋಗದ ರೀತಿ ಬಂದೋಬಸ್ತ್ ಮಾಡಿರುವುದಿಂದ ಎಲ್ಲೊಂದರಲ್ಲಿ ಮಳೆ ನೀರು ನೀಂತುಕೊಂಡಿದ್ದು, ಹಲವೆಡೆ ಸಂಚಾರ ದಟ್ಟಣೆಯಾಗಿದೆ. ಸಣ್ಣ ಮಳೆಗೆ ಬೆಂಗಳೂರು ಹೇಗಾಗಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
- Ramesh B Jawalagera
- Updated on: Jun 20, 2026
- 7:19 pm
Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ: 5 ದಿನದ ವರದಿ ಹೀಗಿದೆ
ಈ ಬಾರಿಗೆ ಮೇ 29ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿತ್ತಾದರೂ, ಜೂ.4ಕ್ಕೆ ಅಧಿಕೃತವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು. ಬಳಿಕದಲ್ಲಿ ಕರಾವಳಿ ಕರ್ನಾಟದ ಮೂಲಕ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತು. ಆದರೆ ಮಳೆಗಾಲ ಆರಂಭದಲ್ಲೇ ಮುಂಗಾರು ದುರ್ಬಲಗೊಂಡಿದೆ. ಇದರ ಮಧ್ಯೆಯೂ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ ಇದೆ. ಹಾಗಾದ್ರೆ, ಎಲ್ಲೆಲ್ಲಿ ಎಷ್ಟು ದಿನ ಮಳೆಯಾಗಲಿದೆ ಎನ್ನುವ ಭಾರತೀಯ ಹವಾಮಾನ ಇಲಾಖೆಯ ವರದಿ ಇಲ್ಲಿದೆ.
- Ramesh B Jawalagera
- Updated on: Jun 20, 2026
- 6:03 pm
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್
ರಾಜಧಾನಿ ಬೆಂಗಳೂರಲ್ಲಿ ಜೂ.20ರಂದು ವಾರಾಂತ್ಯದ ಮಜಾ ಹೆಚ್ಚಿಸುವ ತಂಪಾದ ವಾತಾವರಣ, ಮಳೆಯ ಮುನ್ಸೂಚನೆಯಿದೆ. ನೈಋತ್ಯ ಮುಂಗಾರು ಚುರುಕಾಗಿದ್ದು, ನಗರದಲ್ಲಿ ಹಗಲಿನಲ್ಲಿ ಶೇ.40, ರಾತ್ರಿಯಲ್ಲಿ ಶೇ.65ರಷ್ಟು ಮಳೆ ನಿರೀಕ್ಷಿಸಲಾಗಿದೆ. ಕರಾವಳಿಯಲ್ಲಿ ಜೂ.21ರಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ, ಗುಡುಗು ಸಹಿತ ಗಾಳಿ ಇರಲಿದೆ.
- Akshay Pallamajalu
- Updated on: Jun 20, 2026
- 6:53 am
