AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ಹವಾಮಾನ ಮುನ್ಸೂಚನೆ

ಬೆಂಗಳೂರು ಹವಾಮಾನದ ಸ್ಥಿತಿ

ಬೆಂಗಳೂರು ಹವಾಮಾನದ ಸ್ಥಿತಿ

ಪ್ರಸ್ತುತ ತಾಪಮಾನದ ಮಟ್ಟ
ಬೆಂಗಳೂರು ಹವಾಮಾನದ ಸ್ಥಿತಿ

22°C

ಆನಂದದಾಯಕ

ಭಾಗಶಃ ಮೋಡ

ಅನುಭವವಾಗುವ ತಾಪಮಾನ 24° C ಆರ್ದ್ರತೆ 88%
ಬೆಂಗಳೂರು ಹವಾಮಾನದ ಸ್ಥಿತಿ
ಕೊನೆಯ ನವೀಕರಣ: 2026-06-10 04:00 (ಸ್ಥಳೀಯ ಸಮಯ)

ಭಾರತದ ಅತ್ಯಂತ ಬಿಸಿಯಾದ ನಗರಗಳು

ಕ್ರಮಾಂಕ ನಗರ ತಾಪಮಾನ ಸ್ಥಿತಿ ಹವಾಮಾನದ ಸ್ಥಿತಿ
1 ಘಾಜಿಯಾಬಾದ್ 37°C ಬಿಸಿ Weather ConditionsSevere Sandstorm
2 ಬಂದಾ 37°C ಬಿಸಿ Weather Conditionsಭಾಗಶಃ ಮೋಡ
3 ನೋಯ್ಡಾ 37°C ಬಿಸಿ Weather ConditionsSevere Sandstorm
4 ಇಟಾವಾ 37°C ಬಿಸಿ Weather ConditionsSevere Sandstorm
5 ಚಿಪ್ಯಾನ ಖುರ್ದ್ ಉರ್ಫ್ ಟಿಗ್ರಿ 36°C ಬಿಸಿ Weather ConditionsSevere Sandstorm
6 ಫರಿದಾಬಾದ್ 36°C ಬಿಸಿ Weather ConditionsSevere Sandstorm
7 ಗ್ರೇಟರ್ ನೋಯ್ಡಾ 35°C ಬಿಸಿ Weather ConditionsSevere Sandstorm
8 ಝಾನ್ಸಿ 35°C ಬಿಸಿ Weather Conditionsಸ್ಪಷ್ಟ ಆಕಾಶ
9 ಓರ್ಚಾ 35°C ಬಿಸಿ Weather Conditionsಸ್ಪಷ್ಟ ಆಕಾಶ
10 ಭಿವಾಡಿ 35°C ಬಿಸಿ Weather ConditionsSevere Sandstorm
ಕೊನೆಯ ನವೀಕರಣ: 2026-06-10 04:00 (ಸ್ಥಳೀಯ ಸಮಯ)
ಕ್ರಮಾಂಕ ನಗರ ತಾಪಮಾನ ಸ್ಥಿತಿ ಹವಾಮಾನದ ಸ್ಥಿತಿ
1 ಮನಾಲಿ 1°C Chilly Weather Conditionsಸ್ಪಷ್ಟ ಆಕಾಶ
2 ಶಂಶಿ 10°C Chilly Weather Conditionsಸ್ಪಷ್ಟ ಆಕಾಶ
3 ಬಂಡಿಪೋರಾ 10°C Chilly Weather Conditionsಸ್ಪಷ್ಟ ಆಕಾಶ
4 ಹಂದ್ವಾರ 10°C Chilly Weather Conditionsಸ್ಪಷ್ಟ ಆಕಾಶ
5 ಸೋಪೋರ್ 11°C ತಂಪು Weather Conditionsಸ್ಪಷ್ಟ ಆಕಾಶ
6 ಕುಲ್ಗಾಮ್ 12°C ತಂಪು Weather Conditionsಸ್ಪಷ್ಟ ಆಕಾಶ
7 ಶ್ರೀನಗರ 12°C ತಂಪು Weather Conditionsಸ್ಪಷ್ಟ ಆಕಾಶ
8 ಗ್ಯಾಂಗ್ಟಾಕ್ 14°C ತಂಪು Weather Conditionsಕೆಲವೆಡೆ ಮಳೆಯ ಸಾಧ್ಯತೆ
9 ಉಧಂಪುರ 17°C ತಂಪು Weather Conditionsಸ್ಪಷ್ಟ ಆಕಾಶ
10 ಬಿಷ್ಣುಪುರ 17°C ತಂಪು Weather Conditionsಮಂಜು
ಕೊನೆಯ ನವೀಕರಣ: 2026-06-10 04:00 (ಸ್ಥಳೀಯ ಸಮಯ)

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ?

Monsoon 2026: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್ 10 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಉಳಿದ ಹಲವೆಡೆ ಸಾಧಾರಣ ಮಳೆಯ ನಿರೀಕ್ಷೆ ಇದೆ.

Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ

Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್

ರಾಜ್ಯದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ಮುಂದಿನ ಆರು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 'ಅತಿ ಭಾರೀ ಮಳೆ'ಯಾಗುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ನೀರು ನುಗ್ಗಿದ್ದರೆ, ಬಾಗಲಕೋಟೆಯಲ್ಲಿ ದೇವಸ್ಥಾನ ಜಲಾವೃತಗೊಂಡಿದೆ. ಹವಾಮಾನ ಇಲಾಖೆಯು ಜೂನ್ 9 ಮತ್ತು 10 ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ನೈಋತ್ಯ ಮುಂಗಾರು (Southwest Monsoon) ಕರ್ನಾಟಕ ಪ್ರವೇಶಿಸಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ತೀವ್ರ ಮುನ್ನೆಚ್ಚರಿಕೆಯನ್ನು (ರೆಡ್/ಆರೆಂಜ್ ಅಲರ್ಟ್) ನೀಡಿದೆ.

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Monsoon 2026: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿ ಸಹಿತ ಗುಡುಗು ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ

Monsoon 2026:ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಇಂದಿನಿಂದ ಜೂನ್ 11 ರವರೆಗೆ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮೀನುಗಾರರಿಗೆ, ಪ್ರವಾಸಿಗರಿಗೆ ಬಿಗ್​​​ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಲಿದ್ದು, IMD ಜೂನ್ 11ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಒಳನಾಡಿಗೆ 'ಯೆಲ್ಲೋ ಅಲರ್ಟ್', ಕರಾವಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಸಿಡಿಲು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಸಾರ್ವಜನಿಕರು, ರೈತರು, ಮೀನುಗಾರರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಪ್ರವಾಹ ಭೀತಿ ಇರುವ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Monsoon Rain 2026: ಭಾರತಕ್ಕೆ ಮುಂಗಾರುಅಧಿಕೃತ ಪ್ರವೇಶ, ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ವಿಪರೀತ ಗಾಳಿ, ಮಳೆ

ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು, ಕರ್ನಾಟಕ, ಕೇರಳ, ದೆಹಲಿ-ಎನ್‌ಸಿಆರ್‌ಗೆ ಭಾರಿ ಮಳೆ ತರಲಿದೆ. ಜೂನ್ 4 ರಂದು ಘೋಷಣೆಯಾದ ಮುಂಗಾರು ರೈತರಿಗೆ ವರದಾನವಾಗಿದ್ದು, ವಿಶೇಷವಾಗಿ ಮುಂಗಾರು ಬಿತ್ತನೆಗೆ ಸಹಕಾರಿಯಾಗಲಿದೆ. ಎಲ್ ನಿನೋ ಪರಿಸ್ಥಿತಿಗಳ ನಡುವೆಯೂ, ಧನಾತ್ಮಕ ಐಓಡಿ ಮಳೆಗೆ ಪೂರಕವಾಗಿದೆ. ದಕ್ಷಿಣ, ಉತ್ತರ ಮತ್ತು ಈಶಾನ್ಯ ಭಾರತದಾದ್ಯಂತ ತಾಪಮಾನ ಇಳಿಸಿ, ದೇಶವನ್ನು ತಂಪಾಗಿಸಲಿದೆ.

Karnataka Weather Forecast: ರಾಜ್ಯದ ಹಲವೆಡೆ ವರುಣನ ಅಬ್ಬರ, ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ!

Monsoon 2026:ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ಉತ್ತರ ಒಳನಾಡಿನ 7 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಸುರಕ್ಷಿತವಾಗಿರಲು ಸೂಚಿಸಲಾಗಿದೆ.

Monsoon 2026: ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಭಾರತದ ಕೃಷಿ ವಲಯಕ್ಕೆ ಅತ್ಯಂತ ಪ್ರಮುಖವಾಗಿರುವ ನೈಋತ್ಯ ಮುಂಗಾರು ಮಾರುತಗಳು ಇಂದು (ಜೂನ್ 4) ಅಧಿಕೃತವಾಗಿ ಕೇರಳವನ್ನು ಪ್ರವೇಶಿಸಿವೆ. ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಬರಬೇಕಿದ್ದ ಮುಂಗಾರು, ಈ ಬಾರಿ 3 ದಿನ ತಡವಾಗಿ ಆಗಮಿಸಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯಾದ್ಯಂತ 'ಆರೆಂಜ್ ಅಲರ್ಟ್' ಘೋಷಿಸಿದೆ. ಮೇ 15ರಂದು ಹವಾಮಾನ ಇಲಾಖೆಯು ಹೊರಡಿಸಿದ್ದ ಮುನ್ಸೂಚನೆಯಲ್ಲಿ ಮೇ 26ರ ಸುಮಾರಿಗೆ ಮುಂಗಾರು ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಬಳಿಕ ಆ ದಿನಾಂಕವನ್ನು ಮುಂದೂಡಲಾಗಿತ್ತು.

Weather Report: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ!

ಜೂನ್ 4 ರಿಂದ ಕರ್ನಾಟಕದಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಸಹಿತ ವರುಣನ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ತಾಪಮಾನ ಹೆಚ್ಚಾಗಿರಲಿದೆ. ರಾಜ್ಯಾದ್ಯಂತ ತೇವಾಂಶದ ಪ್ರಮಾಣ ಹೆಚ್ಚಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ.