Humidity 60%
Wind 7.4 KMPH

Sunrise
05:59 am

Sunset
06:50 pm

Moonrise
05:46 pm

Moonset
04:19 am
Next 6 days | Min | Max |
---|---|---|
10 Jul (Thu) ![]() |
20.0°c | 29.0°c |
11 Jul (Fri) ![]() |
20.0°c | 29.0°c |
12 Jul (Sat) ![]() |
20.0°c | 29.0°c |
13 Jul (Sun) ![]() |
20.0°c | 29.0°c |
14 Jul (Mon) ![]() |
20.0°c | 29.0°c |
ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
- Nayana Rajeev
- Updated on: Jul 09, 2025
- 7:25 AM
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಮಳೆ ಜೋರು
ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದೆ, ಕಳೆದ ಒಂದು ವಾರದಿಂದ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
- Nayana Rajeev
- Updated on: Jul 08, 2025
- 7:38 AM
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ರುದ್ರಪ್ರಯಾಗ ಮತ್ತು ಉತ್ತರಾಖಂಡದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅಲಕನಂದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿ ಇನ್ನೂ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಸ್ತೆಯ ಉದ್ದಕ್ಕೂ ವಿಸ್ತರಿಸಿರುವ ವಿಪತ್ತು ಪೀಡಿತ ಸಿಲೈ ಬ್ಯಾಂಡ್ ಮತ್ತು ಓಜ್ರಿ ಬ್ಯಾಂಡ್ನ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳು ಕೊಚ್ಚಿಹೋಗಿ, ಯಾತ್ರಾ ಸ್ಥಳಕ್ಕೆ ಸಂಪರ್ಕ ಕಡಿತಗೊಂಡಿತ್ತು.
- Sushma Chakre
- Updated on: Jul 07, 2025
- 9:32 PM
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಾದ್ಯಂತ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.ಗಾಳಿಯು ಗಂಟೆಗೆ 40 ಕಿ.ಮೀನಿಂದ 50 ಕಿ.ಮೀವರೆಗೂ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ಕೆಲವಡೆ ಮಳೆಯಾಗಿದೆ.
- Nayana Rajeev
- Updated on: Jul 07, 2025
- 7:59 AM
ಮಳೆಯಿಂದಾಗಿ ನಿಗದಿತ ಸಮಯಕ್ಕೆ ಆರಂಭವಾಗದ ಐದನೇ ದಿನದಾಟ
Edgbaston Test Day 5 Weather Forecast: ಭಾರತವು ಬರ್ಮಿಂಗ್ಹ್ಯಾಮ್ ಟೆಸ್ಟ್ನಲ್ಲಿ ಇಂಗ್ಲೆಂಡ್ ಮೇಲೆ ಮೇಲುಗೈ ಸಾಧಿಸಿದೆ. ಗೆಲುವಿಗೆ ಭಾರತಕ್ಕೆ 7 ವಿಕೆಟ್ಗಳು ಮಾತ್ರ ಬೇಕಾಗಿದ್ದರೂ, ಕೊನೆಯ ದಿನದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಪಂದ್ಯ ವಿಳಂಬವಾಗುವ ಸಾಧ್ಯತೆಯಿದೆ, ಇದು ಇಂಗ್ಲೆಂಡ್ಗೆ ಅನುಕೂಲವಾಗಬಹುದು. ಹವಾಮಾನ ವರದಿಯ ಪ್ರಕಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
- pruthvi Shankar
- Updated on: Jul 06, 2025
- 4:42 PM
ಟೀಮ್ ಇಂಡಿಯಾ ಗೆಲುವಿಗೆ ಮಳೆ ಅಡ್ಡಿ?: ಎಡ್ಜ್ಬಾಸ್ಟನ್ ಹವಾಮಾನ ಹೇಗಿದೆ?
Edgbaston Test Day 5 Weather Forecast: ಎಡ್ಜ್ಬಾಸ್ಟನ್ ಟೆಸ್ಟ್ನ 5 ನೇ ದಿನದ ಹವಾಮಾನದ ಬಗ್ಗೆ ಮಾತನಾಡಿದರೆ, ಅಕ್ಯೂವೆದರ್ ವರದಿಯ ಪ್ರಕಾರ, ಬೆಳಿಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಸ್ಥಳೀಯ ಸಮಯದಂತೆ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆ ಶೇ. 79 ರಷ್ಟು ಇದೆ. ಐದನೇ ದಿನದ ಆಟ ಸ್ಥಳೀಯ ಸಮಯದಂತೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದೆ.
- Vinay Bhat
- Updated on: Jul 06, 2025
- 9:25 AM
ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ
ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜುಲೈ 12ರವರೆಗೂ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಕೂಡ ಮಳೆಯಾಗಲಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಕೂಡ ಮಳೆಯಾಗಲಿದೆ.
- Nayana Rajeev
- Updated on: Jul 06, 2025
- 7:51 AM
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ 75 ಸಾವು, 288 ಜನರಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಭೀಕರತೆಯಿಂದಾಗಿ 75 ಜನರು ಸಾವನ್ನಪ್ಪಿದ್ದಾರೆ, 40 ಮಂದಿ ಕಾಣೆಯಾಗಿದ್ದಾರೆ. 288 ಜನರಿಗೆ ಗಾಯಗಳಾಗಿವೆ. 500ಕ್ಕೂ ಹೆಚ್ಚು ರಸ್ತೆಗಳು ಧಾರಾಕಾರ ಮಳೆಯಿಂದಾಗಿ ಬಂದ್ ಆಗಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯು ಹಿಮಾಚಲ ಪ್ರದೇಶವನ್ನು ಹಾನಿಗೊಳಿಸಿದ್ದು, ರಕ್ಷಣಾ ಕಾರ್ಯಗಳು ಮುಂದುವರಿದಿರುವುದರಿಂದ ಮತ್ತು ಜುಲೈ 7ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.
- Sushma Chakre
- Updated on: Jul 05, 2025
- 6:36 PM
Karnataka Rains: ಮಳೆ ಆರ್ಭಟ, ಇಂದು ಕೂಡ ಶಾಲೆಗಳಿಗೆ ರಜೆ
ಕರ್ನಾಟಕದಲ್ಲಿ ಭಾರಿ ಮಳೆಯಿಂದಾಗಿ ಹಲವು ಅಣೆಕಟ್ಟೆಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. ಉತ್ತರ ಕನ್ನಡದಲ್ಲಿ ಗುಡ್ಡ ಕುಸಿದಿದೆ. ಜೊತೆಗೆ ರಾಜ್ಯದ ಕೆಲವೆಡೆ ಇಂದು ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
- Gangadhar Saboji
- Updated on: Jul 05, 2025
- 7:46 AM
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದ ಪ್ರವಾಹದಲ್ಲಿ ಎಲ್ಪಿಜಿ ಟ್ರಕ್ ಕೊಚ್ಚಿ ಹೋಗಿದೆ. ಚಾಲಕ ಮತ್ತು ಆತನ ಸಹಾಯಕ ಪವಾಡಸದೃಶವಾಗಿ ಪಾರಾಗಿದ್ದಾರೆ. ಜಬಲ್ಪುರದಲ್ಲಿ ಪ್ರವಾಹದಿಂದ ತುಂಬಿ ಹರಿಯುತ್ತಿದ್ದ ನದಿಯ ಬಲವಾದ ಪ್ರವಾಹಕ್ಕೆ ಎಲ್ಪಿಜಿ ಟ್ರಕ್ ಕೊಚ್ಚಿ ಹೋಗಿದೆ. ಚಾಲಕ ಮತ್ತು ಸಹಾಯಕ ಸಕಾಲದಲ್ಲಿ ಪವಾಡಸದೃಶವಾಗಿ ಪಾರಾಗಿದ್ದಾರೆ. ಈ ನಾಟಕೀಯ ಘಟನೆಯ ವಿಡಿಯೋ ವೈರಲ್ ಆಗಿದೆ. ಸಲೈಯಾ ಗ್ರಾಮದ ಬಳಿಯ ಬರೇಲಾ ಮತ್ತು ಕುಂದಮ್ ನಡುವಿನ ಪ್ರವಾಹದಿಂದ ತುಂಬಿದ್ದ ಸೇತುವೆಯನ್ನು ದಾಟಲು ಚಾಲಕ ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
- Sushma Chakre
- Updated on: Jul 04, 2025
- 7:11 PM