Humidity 74%
Wind 7.4 KMPH
![Sunrise](https://images.tv9kannada.com/wp-content/themes/tv9kannada/images/sunrise.png)
Sunrise
05:57 am
![Sunset](https://images.tv9kannada.com/wp-content/themes/tv9kannada/images/sunset.png)
Sunset
06:50 pm
![Moonrise](https://images.tv9kannada.com/wp-content/themes/tv9kannada/images/moonrise.png)
Moonrise
01:35 am
![Moonset](https://images.tv9kannada.com/wp-content/themes/tv9kannada/images/moonset.png)
Moonset
02:32 pm
Next 6 days | Min | Max |
---|---|---|
02 Jul (Tue) ![]() |
20.0°c | 28.0°c |
03 Jul (Wed) ![]() |
20.0°c | 30.0°c |
04 Jul (Thu) ![]() |
20.0°c | 30.0°c |
05 Jul (Fri) ![]() |
20.0°c | 30.0°c |
06 Jul (Sat) ![]() |
20.0°c | 30.0°c |
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಆರೆಂಜ್ ಮತ್ತು ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರ ನಡುವೆ ನಿನ್ನೆ ರಾತ್ರಿ ಸುರಿದ ಮಳೆಯಿಂದ ರಸ್ತೆಗಳ ತುಂಬ ನೀರು ಉಕ್ಕಿ ಹರಿಯುತ್ತಿದೆ. ಈ ವೇಳೆ ಟ್ರಾಫಿಕ್ನಲ್ಲಿ ಸಿಲುಕಿದ್ದ ವಾಹನ ಸವಾರರ ಎದುರು ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ.
- Sushma Chakre
- Updated on: Jul 01, 2024
- 10:14 PM
ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ; ಮೀನುಗಾರರಿಗೆ ಹವಾಮಾನ ಇಲಾಖೆ ಹೈ ಅಲರ್ಟ್
Rain Updates: ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹದ ಆತಂಕವನ್ನು ಹೆಚ್ಚಿಸಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ಕುಮಾರಧಾರ, ಕಾವೇರಿ, ತುಂಗಾ, ಲಕ್ಷ್ಮಣ ತೀರ್ಥ ಮತ್ತು ಸುವರ್ಣ ಮುಂತಾದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
- Sushma Chakre
- Updated on: Jun 28, 2024
- 8:29 PM
ಮಂಗಳೂರಿನಲ್ಲಿ ಸಮುದ್ರ ಪಾಲಾದ ಮನೆ, ವಿಡಿಯೋ ವೈರಲ್
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕುಮಾರಧಾರಾ, ಕಾವೇರಿ, ತುಂಗಾ, ಲಕ್ಷ್ಮಣತೀರ್ಥ, ಸುವರ್ಣಾ ಸೇರಿ ಹಲವು ನದಿಗಳು ಮೈದುಂಬಿ ಹರಿಯುತ್ತಿವೆ. ಅಲ್ಲದೆ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ಓದಿ
- Vivek Biradar
- Updated on: Jun 28, 2024
- 11:34 AM
ಕರ್ನಾಟಕದಾದ್ಯಂತ ಮುಂದುವರಿದ ಮಳೆ ಅಬ್ಬರ; ದ.ಕ.ದಲ್ಲಿ ಈವರೆಗೆ 7 ಮಂದಿ ಸಾವು
ಕರ್ನಾಟಕದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ. ಅತ್ತ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿಯೂ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ರಾಜ್ಯದ ಎಲ್ಲೆಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಮುಂದಿನ ಕೆಲವು ದಿನಗಳು ಹವಾಮಾನ ಇಲಾಖೆ ಯಾವ ಜಿಲ್ಲೆಗೆ ಯಾವ ಅಲರ್ಟ್ ನೀಡಿದೆ ಎಂಬ ವರದಿ ಇಲ್ಲಿದೆ.
- Pruthviraj
- Updated on: Jun 28, 2024
- 6:55 AM
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಇಲ್ಲಿದೆ ಬದಲಿ ಮಾರ್ಗ
ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾದ್ರೆ, ಎಷ್ಟು ದಿನಗಳ ಕಾಲ ನಿಷೇಧ ಎನ್ನುವ ವಿವರ ಇಲ್ಲಿದೆ.
- Basavaraj Doddamani
- Updated on: Jun 27, 2024
- 11:01 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಆದ್ರೆ, ಕಳೆದ ಎರಡ್ಮೂರು ದಿನನಗಳಲ್ಲಿ ವರುಣ ಅಬ್ಬರ ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ನಾಳೆಯೂ (ಜೂನ್ 28) ಸಹ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಸಹ ದಕ್ಷಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- Ramesh B Jawalagera
- Updated on: Jun 27, 2024
- 7:24 PM
ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಮೈದುಂಬಿ ಧುಮುಕುತ್ತಿರುವ ಜೋಗ್ ಫಾಲ್ಸ್
ಕರ್ನಾಟಕದಲ್ಲಿ ಮುಂಗಾರು ಮಳೆ ಭರ್ಜರಿ ಆರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಡಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇನ್ನು ಮೊದಲ ಮುಂಗಾರು ಮಳೆಗೆ ಶಿವಮೊಗ್ಗದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮತ್ತೊಂದೆಡೆ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಜೀವ ಕಳೆ ಬಂದಿದ್ದು, ಮೈದುಂಬಿ ಧುಮುಕುತ್ತಿದೆ.
- Basavaraj Doddamani
- Updated on: Jun 27, 2024
- 3:28 PM
ಕುಮಾರಧಾರ ಸ್ನಾನಘಟ್ಟ ಮುಳುಗಡೆ, ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ
ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಒಳ ಹರಿವು ಹೆಚ್ಚಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಈ ಹೊತ್ತಿನಲ್ಲಿ ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚನೆ ನೀಡುತ್ತಿವೆ. ಈ ಕುರಿತ ಮಾಹಿತಿ ಇಲ್ಲಿದೆ.
- Vivek Biradar
- Updated on: Jun 27, 2024
- 11:57 AM
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ; ಮಂಗಳೂರಿನಲ್ಲಿ ಇಬ್ಬರು ಸಾವು
ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಮಡಿಕೇರಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಸ್ತೆ, ಸೇತುವೆಗಳು ಮುಳುಗಿವೆ. ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.
- Ayesha Banu
- Updated on: Jun 27, 2024
- 10:37 AM
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮುಂದಿನ 4 ದಿನ ರಣಭೀಕರ ಮಳೆ
ಕರ್ನಾಟಕದ ಬಹುತೇಕ ಕಡೆ ಮುಂಗಾರು ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬುಧವಾರದಿಂದಲೇ ಅತಿ ಹೆಚ್ಚು ಮಳೆ ಸುರಿಯುತ್ತಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- Nayana Rajeev
- Updated on: Jun 27, 2024
- 7:49 AM