Hyderabad
    Hyderabad 12 Jan, 05:30 PM
    25.4°C

    Humidity 58%

    Wind 7.4 KMPH

    Sunrise

    Sunrise

    06:49 am

    Sunset

    Sunset

    06:00 pm

    Moonrise

    Moonrise

    04:26 pm

    Moonset

    Moonset

    05:16 am

    Next 6 days Min Max

    13 Jan (Mon)

    2025-01-13 MonPartly cloudy sky with haze
    19.0°c 28.0°c

    14 Jan (Tue)

    2025-01-14 TuePartly cloudy sky with haze
    19.0°c 28.0°c

    15 Jan (Wed)

    2025-01-15 WedPartly cloudy sky with haze
    20.0°c 29.0°c

    16 Jan (Thu)

    2025-01-16 ThuPartly cloudy sky with haze
    20.0°c 28.0°c

    17 Jan (Fri)

    2025-01-17 FriPartly cloudy sky with haze
    21.0°c 27.0°c

    ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

    ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜನವರಿ 14 ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆೇಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆ ಸಾಧ್ಯತೆ

    ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಿನದಿಂದ ದಿನಕ್ಕೆ ಇಳಿಯುತ್ತಿದೆ. ಬೆಂಗಳೂರಿನಲ್ಲೂ ಬೆಳಿಗ್ಗೆಯಿಂದಲೇ ಮೋಡ ಹಾಗೂ ಮಂಜಿನ ವಾತಾವರಣ ಕಂಡು ಬಂದಿದೆ. ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಸುರಿದು ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಸದ್ಯ ರಾಜ್ಯದಲ್ಲಿ ಶೀತಗಾಳಿ ಕೂಡ ಬೀಸುತ್ತಿದ್ದು, ಸಂಜೆಯಿಂದಲೇ ಚುಮುಚುಮು ಚಳಿ ಕಾಡುತ್ತಿದೆ.

    ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇದೆ. ಚಿಕ್ಕಬಳ್ಳಾಪುರದಲ್ಲಿ ರಸ್ತೆ ಕಾಣದಷ್ಟು ಮಂಜು ಆವರಿಸಿತ್ತು. ಫಾಗ್​ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಪಡುವಂತಾಯಿತು. ವಿಡಿಯೋ ಇಲ್ಲಿದೆ ನೋಡಿ.

    ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ

    ಕರ್ನಾಟಕದಾದ್ಯಂತ ಚಳಿ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಇದೆ. ಅಷ್ಟೇ ಅಲ್ಲದೆ ಉತ್ತ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಚಳಿಯ ಅನುಭವವಾಗುತ್ತಿದೆ.

    ಬೆಂಗಳೂರಿನಲ್ಲಿ ಹೆಚ್ಚಾಯ್ತು ಚಳಿ: ಮುಂದಿನ ಐದು ದಿನ ನಗರ ಗಡಗಡ

    ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಚಳಿಯ ಅಬ್ಬರ ಹೆಚ್ಚಾಗುತ್ತಿದೆ. ಮೈ ನಡುಗಿಸುವ ಚಳಿ ಮಧ್ಯೆ ಬೆಳಗ್ಗೆ, ಸಂಜೆ ವೇಳೆ ಇಬ್ಬನಿ ಕವಿದ ವಾತಾವರಣ ಇರುತ್ತಿದೆ. ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ ಇನ್ನೂ ಕುಸಿತವಾಗಲಿದ್ದು, ಮುಂದಿನ ಐದು ದಿನಗಳ ಕಾಲ ಮತ್ತಷ್ಟು ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವಾರದ ಮುನ್ಸೂಚನೆ ವಿವರ ಇಲ್ಲಿದೆ.

    ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

    ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಿನ ಬಹುತೇಕ ಕಡೆ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ದಟ್ಟ ಮಂಜು: ಉತ್ತರ ಭಾರತದಲ್ಲಿ 200 ವಿಮಾನಗಳ, 24 ರೈಲುಗಳ ಸಂಚಾರಕ್ಕೆ ಅಡ್ಡಿ

    ತೀವ್ರವಾದ ತಾಪಮಾನ ಕುಸಿತ ಮತ್ತು ದಟ್ಟವಾದ ಮಂಜಿನಿಂದಾಗಿ ಉತ್ತರ ಭಾರತದ ಅನೇಕ ನಗರಗಳಲ್ಲಿ ಶುಕ್ರವಾರ ವಿಮಾನ ಮತ್ತು ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿ, ಲಕ್ನೋ, ಅಮೃತಸರ ಸೇರಿದಂತೆ ಉತ್ತರ ಭಾರತದ ವಿವಿಧ ನಗರಗಳಲ್ಲಿ ಸುಮಾರು 200 ವಿಮಾನಗಳ ಹಾರಾಟ ವ್ಯತ್ಯಯವಾಗಿದ್ದು, ಇವುಗಳಲ್ಲಿ ಬೆಂಗಳೂರಿಗೆ ಬರುವ ವಿಮಾನಗಳೂ ಸೇರಿವೆ.

    ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ದಟ್ಟ ಮಂಜು ಆವರಿಸುವ ಸಾಧ್ಯತೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದ್ದು, ಮಂಜು ದಟ್ಟವಾಗಿದೆ. ಬೆಳಗ್ಗೆ ಮತ್ತು ಸಂಜೆ ತೀವ್ರ ಚಳಿಯಿಂದ ಜನರು ಮನೆಯಿಂದ ಹೊರಗೆ ಬರುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ದಿನಗಳಲ್ಲಿ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರ್ನಾಟಕದೆಲ್ಲೆಡೆ ಚುಮು ಚುಮು ಚಳಿ, ಗದಗ, ಬೀದರ್​ನಲ್ಲಿ ಅತಿ ಕಡಿಮೆ ಉಷ್ಣಾಂಶ

    ಚಳಿಗಾಲದ ಚಳಿ ಇಲ್ಲವಾದರೂ ಚಳಿಯಂತೂ ಇದೆ. ಉತ್ತರ ಒಳನಾಡಿನ ಹಲವೆಡೆ ಚಳಿಯ ಪ್ರಮಾಣ ತುಸು ಹೆಚ್ಚೇ ಇದೆ ಎನ್ನಬಹುದು. ಕಳೆದ ಎರಡು ದಿನಗಳಿಂದ ಬಿಸಿಲು ಗೋಚರಿಸುತ್ತಿದೆ, ಆದರೂ ಮಧ್ಯೆ ಮಧ್ಯೆ ಮೋಡದ ವಾತಾವರಣವೂ ನಿರ್ಮಾಣವಾಗುತ್ತಿದೆ. ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 22.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ ಹಾಗೂ ಗದಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.