ಏಷ್ಯಾಕಪ್-2023ರ ಸೂಪರ್-4 ಪಂದ್ಯಕ್ಕೆ ಇಂಜುರಿಗೊಳಗಾಗಿರುವ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.

10 September 2023

ಏಷ್ಯಾಕಪ್-2023ರ ಸೂಪರ್-4 ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

10 September 2023

ಈ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

10 September 2023

ಟಾಸ್ ಬಳಿಕ ಟೀಂ ಇಂಡಿಯಾದ ಪ್ಲೇಯಿಂಗ್-11 ಬಹಿರಂಗಗೊಂಡಿದ್ದು, ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

10 September 2023

ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ.

10 September 2023

ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಮೊಹಮ್ಮದ್ ಶಮಿ ತಂಡದಿಂದ ಹೊರಬಿದ್ದಿದ್ದಾರೆ.

10 September 2023

ಆದರೆ ಟಾಸ್ ಬಳಿಕ ಮಾತನಾಡಿದ ನಾಯಕ ರೋಹಿತ್ ಹೇಳಿದ ವಿಚಾರ ಟೀಂ ಇಂಡಿಯಾ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ.

10 September 2023

ಇಂಜುರಿಯಿಂದ ಚೇತರಿಸಿಕೊಂಡು ಟೀಂ ಇಂಡಿಯಾಕ್ಕೆ ಮರಳಿದ್ದ ಶ್ರೇಯಸ್ ಮತ್ತೊಮ್ಮೆ ಇಂಜುರಿಗೊಳಗಾಗಿದ್ದಾರೆ.

10 September 2023

ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ ರೋಹಿತ್, ಅಯ್ಯರ್ ಅವರಿಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ತಂಡದಿಂದ ಕೈಬಿಡಲಾಗಿದೆ ಎಂದಿದ್ದಾರೆ.

10 September 2023

ಏಷ್ಯಾಕಪ್ ಬಳಿಕ ಏಕದಿನ ವಿಶ್ವಕಪ್ ಇರುವುದರಿಂದ ಅಯ್ಯರ್ ಇಂಜುರಿ ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟು ಮಾಡಿದೆ.

10 September 2023