ವಿಚ್ಛೇದನದ ಬಗ್ಗೆ ಭಾವುಕ ಪೋಸ್ಟ್ ಹಂಚಿಕೊಂಡ ಚೈತ್ರಾ ವಾಸುದೇವನ್

ಕನ್ನಡದ ಬಹುತೇಕ ಈವೆಂಟ್​​​ಗಳ ಮೂಲಕ ಗುರುತಿಸಿಕೊಂಡಿದ್ದ ಖ್ಯಾತ ಆ್ಯಂಕರ್​​ ಚೈತ್ರಾ ವಾಸುದೇವನ್

ತನ್ನ ಮಾತುಗಾರಿಕೆಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. 

ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ವಿಚ್ಛೇದನದ ಬಗ್ಗೆ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

2017ರಲ್ಲಿ ಚೈತ್ರಾ ವಾಸುದೇವನ್ ಹಾಗೂ ಸತ್ಯ ನಾಯ್ಡು ವಿವಾಹ ಜೀವನಕ್ಕೆ ಕಾಲಿಟ್ಟಿದ್ದರು. 

ಇದೀಗಾ ಸತ್ಯ ನಾಯ್ಡು ಅವರಿಂದ ವಿಚ್ಛೇದನ ಪಡೆದುಕೊಂಡಿದ್ದೇನೆ ಎಂದು ಚೈತ್ರ ಹೇಳಿಕೊಂಡಿದ್ದಾರೆ.

ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ ಎಂದು ಬರೆದುಕೊಂಡಿದ್ದಾರೆ.

ನನ್ನ ಅಭಿಮಾನಿಗಳಿಂದ ಇನ್ನೂ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.

ಈ ರೀತಿಯಾಗಿ ಬರೆದುಕೊಂಡಿರುವುದು ಅವರ ಅನೇಕ ಅಭಿಮಾನಿಗಳಿಗೆ ಶಾಕ್ ತಂದಿದೆ.