ರಸ್ತೆ ಒತ್ತುವರಿ ಮೈಲಾಪುರದಲ್ಲಿ ಘರ್ಜಿಸಿದ ಜೆಸಿಬಿ

Author: Rakesh Nayak Manchi

02-Dec-2023

ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಗ್ರಾಮಸ್ಥರು ಅಕ್ರಮವಾಗಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದರು.

ಅತ್ಯಂತ ಪ್ರಸಿದ್ಧ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನದ ರಸ್ತೆಯನ್ನು ಒತ್ತುವರಿ ಮಾಡಿದ್ದರು.

ಒತ್ತುವರಿಯಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅಡಚಣೆ ಉಂಟಾಗುತ್ತಿತ್ತು.

ಭಾನುವಾರ, ಅಮಾವಾಸ್ಯೆ ದಿನದಂದು ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರುತ್ತಾರೆ.

ಜನವರಿ 15 ರಂದು ಮೈಲಾರಲಿಂಗೇಶ್ವರ ಜಾತ್ರೆಯೂ ನಡೆಯಲಿದೆ.

ರಸ್ತೆ ಒತ್ತವರಿಯಿಂದಾಗಿ ಸಮಸ್ಯೆ ಆಗುತ್ತಿರುವ ಹಿನ್ನೆಲೆ ಅಂಗಡಿಗಳ ತೆರವಿಗೆ ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದರು.

ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರೂ ಮನೆ, ಅಂಗಡಿ ಮಾಲೀಕರು ಸ್ಪಂದಿಸಿಲ್ಲ.

ಹೀಗಾಗಿ ಇಂದು ತಹಶೀಲ್ದಾರ್ , ತಾಲೂಕು ಪಂಚಾಯಿತಿ ಇಒ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ಅಂಗಡಿಗಳನ್ನು ತೆರವು ಮಾಡಿದರು.