ಹಾಸ್ಟೆಲ್​ಗೆ ಜಮೀರ್​ ದಿಢೀರ್ ಭೇಟಿ, ವಿಸ್ತರಣಾಧಿಕಾರಿ ಸಸ್ಪೆಂಡ್

ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್​ ಅವರು ಮಂಗಳೂರು ಪ್ರವಾಸ

ಜಮೀರ್ ಅಹಮ್ಮದ್

ಈ ವೇಳೆ ಮಂಗಳೂರಿನ ವೆಲೆನ್ಸಿಯಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್​ಗೆ ದಿಢೀರ್ ಭೇಟಿ ನೀಡಿದ್ದಾರೆ

ಹಾಸ್ಟೆಲ್​ಗೆ ಭೇಟಿ

ಈ ವೇಳೆ ಹಾಸ್ಟೆಲ್​ನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. 

ಜಮೀರ್ ಗರಂ

ಅಲ್ಲದೇ ಸ್ಥಳದಲ್ಲೇ ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು ಮಾಡಿದ್ದಾರೆ.

ಅಧಿಕಾರಿ ಸಸ್ಪೆಂಡ್

ಅಲ್ಲಿನ ಹಾಸ್ಟೆಲ್​ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ ಎಂದು ದೂರಿದ್ದಾರೆ.

ಜಮೀರ್​ಗೆ ದೂರು

ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ. ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಆರೋಪಗಳು

ಇದರಿಂದ ಮತ್ತಷ್ಟು ಸಿಡಿಮಿಡಿಗೊಂಡ ಜಮೀರ್ ಅಹಮ್ಮದ್ ಖಾನ್,  ತಕ್ಷಣ ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅಮಾನತಿಗೆ ಆದೇಶಿಸಿದ್ದಾರೆ.

ಅಮಾನತು

ಅಲ್ಲದೇ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಶೋಕಾಸ್ ನೋಟಿಸ್