ದೇವರ ಮೊರೆ ಹೋದ ಪ್ರಿಯಾಂಕ ಗಾಂಧಿ

ಕರ್ನಾಟಕದಲ್ಲಿ ಚುನಾವಣಾ ಮತ ಎಣಿಕೆಯ ಕಾವು ಹೆಚ್ಚಾಗುತ್ತಿದೆ.

ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ದೇವರ ಮೊರೆ ಹೋಗಿದ್ದಾರೆ. 

ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನದಲ್ಲಿ ಪ್ರಿಯಾಂಕ ಗಾಂಧಿ ಪೂಜೆ ಸಲ್ಲಿಸುತ್ತಿರುವುದನ್ನು ಕಾಣಬಹುದು.

ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸುತ್ತಿದ್ದರು ಎಂದು ಕಾಂಗ್ರೆಸ್​​ ನಾಯಕರು ಹೇಳಿದ್ದಾರೆ. 

ಜೊತೆಗೆ ದೇವಾಲಯದ ಮುಂದೆ ಧ್ಯಾನದಲ್ಲಿ ತೊಡಗಿಸಿಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.