ಪ್ರಯಾಣಿಕರ ಅನುಕೂಲಕ್ಕೆ ಗಣೇಶ ಚತುರ್ಥಿಗೆ ಸಂಚರಿಸಲಿವೆ ವಿಶೇಷ ರೈಲುಗಳು

25 Aug 2024

Ayesha Banu

ಗಣೇಶ ಚತುರ್ಥಿ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರ ಮಾರ್ಗಗಳಲ್ಲಿ ವಿಶೇಷ ರೈಲು ಸಂಚರಿಸಲಿವೆ. 

ವಿಶೇಷ ರೈಲು

ಸೆಪ್ಟೆಂಬರ್ 5 ರಂದು ಸಂಜೆ 7.30ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆ.6ರಂದು ಬೆಳಿಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. 

ವಿಶೇಷ ರೈಲು

ಸೆ.6ರಂದು ರಾತ್ರಿ 10.15ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆ.7ರಂದು ಬೆಳಿಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. 

ವಿಶೇಷ ರೈಲು

ಸೆ.8ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ವಿಶೇಷ ರೈಲು

ಬೆಂಗಳೂರು ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸೆ.5 ಮತ್ತು 7ರಂದು ರಾತ್ರಿ 9ಕ್ಕೆ ಹೊರಡುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೆ.6 ಮತ್ತು 8ರಂದು ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ. 

ವಿಶೇಷ ರೈಲು

ಸೆ.6 ಮತ್ತು 8ರಂದು ವಿಜಯಪುರದಿಂದ ಹೊರಡುವ ರೈಲು ಸೆ.7 ಮತ್ತು 9ರಂದು ಬೆಳಿಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ.

ವಿಶೇಷ ರೈಲು

ಮುಂಗಡ ಬುಕ್ಕಿಂಗ್‌ ಮತ್ತು ವೇಳಾಪಟ್ಟಿ ಮಾಹಿತಿಗಾಗಿ www.enquiry.indianrail.gov.in ಜಾಲತಾಣಕ್ಕೆ ಭೇಟಿ ನೀಡಬಹುದು. ಅಥವಾ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

bಉಕ್ಕಿಂಗ್