ಬಾಂಗ್ಲಾ ವಿರುದ್ಧದ ಟಿ20 ಸರಣಿಯಲ್ಲಿ ಮೂವರ ಪದಾರ್ಪಣೆ

29 september 2024

Pic credit: Google

ಪೃಥ್ವಿ ಶಂಕರ

Pic credit: Google

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ.

Pic credit: Google

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಮೂರು ಪಂದ್ಯಗಳ ಈ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ.

Pic credit: Google

ಮುಂಬರುವ ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿ ಯುವಕರಿಗೆ ಅವಕಾಶ ನೀಡಲಾಗಿದ್ದು, ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

Pic credit: Google

ಮಯಾಂಕ್ ಯಾದವ್, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಕೂಡ ಮೂರು ಪಂದ್ಯಗಳ ಟಿ20 ಸರಣಿಗೆ ಅವಕಾಶ ಪಡೆದಿದ್ದಾರೆ.

Pic credit: Google

ಮೂವರೂ ಐಪಿಎಲ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಕ್ಕಿದೆ.

Pic credit: Google

ಹರ್ಷಿತ್ ಮತ್ತು ನಿತೀಶ್ ಈ ಹಿಂದೆಯೂ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಿದ್ದಾರೆ. ಆದರೆ, ಇಬ್ಬರಿಗೂ ಪಾದಾರ್ಪಣೆ ಮಾಡುವ ಅವಕಾಶ ಇನ್ನೂ ಸಿಕ್ಕಿಲ್ಲ.