ವಾಸ್ತು ತಜ್ಞರ ಪ್ರಕಾರ ಮನೆಯಲ್ಲಿ ಮನಿ ಪ್ಲಾಂಟ್ ಬೆಳೆಸುವುದರಿಂದಾಗುವ ಲಾಭಗಳು ಇಲ್ಲಿವೆ

ಮನಿ ಪ್ಲಾಂಟ್ ಹೆಸರೇ ಸೂಚಿಸುವಂತೆ ಸಂಪತ್ತು ಸಮೃದ್ಧಿಗಾಗಿ ಬೆಳೆಸಲಾಗುತ್ತದೆ. 

ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎಂಬ ನಂಬಿಕೆಯಿಂದ ಈ ಗಿಡಗಳನ್ನು ಬೆಳೆಸಲಾಗುತ್ತದೆ.

ಈ ಗಿಡವನ್ನು ಮನೆಯ ಆಗ್ನೇಯ ದಿಕ್ಕಿನಲ್ಲಿ ಇರಿಸಿದರೆ ಅದೃಷ್ಟ ಎಂದು ವಾಸ್ತು ತಜ್ಞರು ಹೇಳುತ್ತಾರೆ. 

ಇದು ನಿಮ್ಮ ಅದೃಷ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. 

ಈ ಗಿಡವು ಮನೆಯ ಹಣಕಾಸಿನ ಸಮಸ್ಯೆಯನ್ನು ನಿವಾರಿಸುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಇದನ್ನು ನೆಡುವಾಗ, ಅದರ ಬೇರಿನ ಬಳಿ ಕೆಂಪು ಬಣ್ಣದ ದಾರವನ್ನು ಕಟ್ಟಿ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಜೊತೆಗೆ ಪ್ರತೀ ಶುಕ್ರವಾರ ಇದಕ್ಕೆ ಹಾಲು ಮತ್ತು ನೀರು ಮಿಶ್ರಣ ಮಾಡಿ ಸುರಿಯಿರಿ.

ಶುಕ್ರವಾರ ಈ ರೀತಿ ಮಾಡುವುದರಿಂದ ಮನೆಯಲ್ಲಿ ಲಕ್ಷ್ಮೀ ನೆಲೆಸುತ್ತಾಳೆ ಎಂಬ ನಂಬಿಕೆ ಇದೆ.