ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ?

ಜಗತ್ತಿನಲ್ಲಿ ಹಲವು ಯುದ್ಧಗಳು ನಡೆದಿವೆ. ರಷ್ಯಾ-ಉಕ್ರೇನ್ ಯುದ್ಧವು ಐದನೇ ವರ್ಷಕ್ಕೆ ಕಾಲಿಟ್ಟಿದ್ದರೂ ಯಾವುದೇ ಸ್ಪಷ್ಟ ಪರಿಹಾರ ಸಿಕ್ಕಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆಯೂ ಯುದ್ಧ ನಡೆದು ಅದರ ಪರಿಣಾಮವನ್ನು ಅನೇಕ ಇತರೆ ದೇಶಗಳೂ ಅನುಭವಿಸಿವೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಈ ಎಲ್ಲ ಯುದ್ಧಗಳಿಗಿಂತಲೂ ಬಹಳ ಭಿನ್ನವಾಗಿತ್ತು. ಆ ಕಾರ್ಯಾಚರಣೆಯಲ್ಲಿ ಭಾರತ ಒಂದೇ ಒಂದು ಅಮಾಯಕರ ಜೀವವನ್ನೂ ಬಲಿ ಪಡೆಯದೆ ಕೇವಲ ಉಗ್ರರನ್ನು ಮಾತ್ರ ಟಾರ್ಗೆಟ್ ಮಾಡಿ ನಾಶಪಡಿಸಿದ್ದು ವಿಶೇಷ. ಆಪರೇಷನ್ ಸಿಂಧೂರ್​​ ನಡೆದು 1 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಹಿನ್ನೋಟ ಇಲ್ಲಿದೆ.

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ?
Operation Sindoor

Updated on: May 06, 2026 | 8:02 PM

ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು.

ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ ಎಚ್ಚರ ವಹಿಸಿತ್ತು. ಅಮಾಯಕರಿಗೆ ಯಾವುದೇ ತೊಂದರೆಯಾಗದಂತೆ ಕೇವಲ ಉಗ್ರರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುವುದು ಸುಲಭದ ಸಂಗತಿಯಾಗಿರಲಿಲ್ಲ. ಆದರೂ ಆ ಸವಾಲನ್ನು ಭಾರತದ ವಾಯುಪಡೆ, ಸೇನಾಪಡೆ ಯಶಸ್ವಿಯಾಗಿ ನಿರ್ವಹಿಸಿತು.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ

ಆ ಘಟನೆ ನಡೆದು ಒಂದು ವರ್ಷವಾಗಿದೆ. ಇಂದು ನಾವು ನೋಡುವ ಹೆಚ್ಚಿನ ಜಾಗತಿಕ ಸಂಘರ್ಷಗಳಲ್ಲಿ ವಿನಾಶವನ್ನು ನಿಯಂತ್ರಿಸಲು ಸಾಧ್ಯವೇ ಆಗುವುದಿಲ್ಲ. ಇದು ಎರಡೂ ಕಡೆಯ ಆರ್ಥಿಕತೆಗಳು ಮತ್ತು ನಾಗರಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಆಪರೇಷನ್ ಸಿಂಧೂರ್ ವಿಭಿನ್ನವಾಗಿತ್ತು. ಇದರಲ್ಲಿ ಅಮಾಯರು ಯಾರೂ ಬಲಿಯಾಗಲಿಲ್ಲ. ಭಾರತ ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ನಡೆಸಿದ್ದ ಈ ದಾಳಿ ಯಾವುದೇ ಬಿಕ್ಕಟ್ಟಿಗೂ ಕಾರಣವಾಗಲಿಲ್ಲ.

ಭಾರತವು ಪಾಕಿಸ್ತಾನದ ಭಯೋತ್ಪಾದನೆ ಮತ್ತು ಮಿಲಿಟರಿ ಮೂಲಸೌಕರ್ಯದ ಮೇಲೆ ತೀವ್ರ ದಾಳಿ ನಡೆಸಿ ಹಾನಿಯನ್ನುಂಟುಮಾಡಿತು. ಆದರೆ, ಯಾವುದೇ ಮನೆಗಳಿಗೂ ಹಾನಿಯಾಗಲಿಲ್ಲ. ಪಾಕಿಸ್ತಾನಿ ಕ್ಷಿಪಣಿಗಳಿಂದ ಭಾರತಕ್ಕೆ ಯಾವುದೇ ಹಾನಿಯಾಗಲು ಬಿಡಲಿಲ್ಲ. ಈ ಮಿಲಿಟರಿ ಕಾರ್ಯಾಚರಣೆಯ ಪರಿಣಾಮವಾಗಿ ಭಾರತದಲ್ಲಿ ಯಾವುದೇ ಆರ್ಥಿಕ ಆಘಾತ ಉಂಟಾಗಿಲ್ಲ.

ಭಾರತೀಯ ವಾಯುಪಡೆಯು ಪಾಕಿಸ್ತಾನದ ಚೀನಾ ಸರಬರಾಜು ಮಾಡಿದ ವಾಯು ರಕ್ಷಣಾ ವ್ಯವಸ್ಥೆಗಳನ್ನು ಬೈಪಾಸ್ ಮಾಡಿ ಜ್ಯಾಮ್ ಮಾಡಿತು. ರಫೇಲ್ ಜೆಟ್‌ಗಳು, SCALP ಕ್ಷಿಪಣಿಗಳು ಮತ್ತು ಹ್ಯಾಮರ್ ಬಾಂಬ್‌ಗಳನ್ನು ಬಳಸಿಕೊಂಡು ಕೇವಲ 23 ನಿಮಿಷಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿತು.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಬೀಜಿಂಗ್ ಮಧ್ಯಸ್ಥಿಕೆ; ಲಜ್ಜೆಗೆಟ್ಟು ಚೀನಾದ ಬೆಂಬಲಕ್ಕೆ ನಿಂತ ಪಾಕಿಸ್ತಾನ

ಮೇ 10 ರಂದು ಕೆಲವೇ ಗಂಟೆಗಳಲ್ಲಿ ಭಾರತವು ನೂರ್ ಖಾನ್, ರಫೀಕಿ, ಮುರಿಯ್, ಸುಕ್ಕೂರ್, ಸಿಯಾಲ್‌ಕೋಟ್, ಪಸ್ರೂರ್, ಚುನಿಯನ್, ಸರ್ಗೋಧಾ, ಸ್ಕಾರ್ಡು, ಭೋಲಾರಿ ಮತ್ತು ಜಕೋಬಾಬಾದ್ ವಾಯುನೆಲೆಗಳು ಸೇರಿದಂತೆ 11 ಪ್ರಮುಖ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿತು. ಈ ದಾಳಿಗಳು ಪಾಕಿಸ್ತಾನದ ವಾಯು ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಕುಗ್ಗಿಸಿದವು.

ಈ ಕ್ರಮಗಳೊಂದಿಗೆ, ಭಾರತವು ಒಂದೇ ಕಾರ್ಯಾಚರಣೆಯಲ್ಲಿ ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರದ 11 ವಾಯುನೆಲೆಗಳನ್ನು ಹೊಡೆದುರುಳಿಸಿದ ಮೊದಲ ದೇಶವಾಯಿತು. ಪಾಕಿಸ್ತಾನದ ವಾಯುಪಡೆಯ ಸ್ವತ್ತುಗಳಲ್ಲಿ ಶೇ. 20ರಷ್ಟನ್ನು ನಾಶಪಡಿಸಿತು. ಭೋಲಾರಿ ವಾಯುನೆಲೆಯಲ್ಲಿ ಸ್ಕ್ವಾಡ್ರನ್ ಲೀಡರ್ ಉಸ್ಮಾನ್ ಯೂಸುಫ್ ಸಾವು ಮತ್ತು ಪ್ರಮುಖ ಫೈಟರ್ ಜೆಟ್‌ಗಳ ನಾಶ ಸೇರಿದಂತೆ ಹೆಚ್ಚಿನ ಸಾವುನೋವುಗಳು ವರದಿಯಾಗಿವೆ.

ಈ ಕಾರ್ಯಾಚರಣೆ ಭಾರತದ ಸ್ವದೇಶಿ ರಕ್ಷಣಾ ಸಾಮರ್ಥ್ಯಗಳ ಪರಿಪಕ್ವತೆಯನ್ನು ಎತ್ತಿ ತೋರಿಸಿತು. ಹಾಗೇ, ಸುಧಾರಿತ ವ್ಯವಸ್ಥೆಗಳ ಜಾಗತಿಕ ರಫ್ತುದಾರನಾಗಿ ಅದರ ವಿಶ್ವಾಸಾರ್ಹತೆಯನ್ನು ಬಲಪಡಿಸಿತು. ಇದಾದ ಒಂದು ವರ್ಷದ ನಂತರ, ಆಪರೇಷನ್ ಸಿಂಧೂರ್ ಹೊಸ ಮಾನದಂಡವನ್ನು ಸ್ಥಾಪಿಸುತ್ತದೆ ಎಂದು ಪರಿಗಣಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us