AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಕಲ್ಲಿದ್ದಲು ಕಂಪನಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 11 ಸಾವು, 51 ಮಂದಿಗೆ ಗಾಯ

ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಕಟ್ಟಡವೊಂದರಲ್ಲಿ ಇಂದು (ನ.16) ಬೆಂಕಿ ಕಾಣಿಸಿಕೊಂಡು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು 51 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚೀನಾದ ಮಾಧ್ಯಮಗಳು ಹೇಳಿದೆ. ಶಾಂಕ್ಸಿ ಪ್ರಾಂತ್ಯದ ಲುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಯೋಂಗ್ಜು ಕಲ್ಲಿದ್ದಲು ಕಂಪನಿಗೆ ಸೇರಿದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 6:50 ರ ಸುಮಾರಿಗೆ (ಬುಧವಾರ 2250 GMT) ಬೆಂಕಿ ಕಾಣಿಸಿಕೊಂಡಿದೆ.

ಚೀನಾದ ಕಲ್ಲಿದ್ದಲು ಕಂಪನಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 11 ಸಾವು, 51 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 16, 2023 | 1:03 PM

Share

ಉತ್ತರ ಚೀನಾದ (China) ಶಾಂಕ್ಸಿ ಪ್ರಾಂತ್ಯದ ಕಟ್ಟಡವೊಂದರಲ್ಲಿ ಇಂದು (ನ.16) ಬೆಂಕಿ ಕಾಣಿಸಿಕೊಂಡು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು 51 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚೀನಾದ ಮಾಧ್ಯಮಗಳು ಹೇಳಿದೆ. ಶಾಂಕ್ಸಿ ಪ್ರಾಂತ್ಯದ ಲುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಯೋಂಗ್ಜು ಕಲ್ಲಿದ್ದಲು ಕಂಪನಿಗೆ ಸೇರಿದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 6:50 ರ ಸುಮಾರಿಗೆ (ಬುಧವಾರ 2250 GMT) ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ ಇಲ್ಲಿಯವರೆಗೆ ಹನ್ನೊಂದು ಜನ ಸಾವನ್ನಪ್ಪಿದ್ದಾರೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗಿದೆ.

ಇಲ್ಲಿಯವರೆಗೆ 63 ಜನರನ್ನು ಕಟ್ಟಡದಿಂದ ಹೊರಗೆ ಕರೆದುಕೊಂಡು ಬರಲಾಗಿದೆ. 51 ಜನರಿಗೆ ಗಾಯಗಳಾಗಿದ್ದು, ಅವರನ್ನು ಲುಲಿಯಾಂಗ್ ಫಸ್ಟ್ ಪೀಪಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಘಟನೆಯ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು

ಇನ್ನು ಈ ಘಟನೆಯ ವಿಡಿಯೋವನ್ನು ಚೀನಾದ Weibo ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​​ ಮಾಡಲಾಗಿದೆ. ಈ ವಿಡಿಯೋದಲ್ಲಿ ದೊಡ್ಡ ಮಟ್ಟದ ಬೆಂಕಿ ಕಟ್ಟಡದಲ್ಲಿ ಕಾಣಿಸಿಕೊಂಡಿದೆ. ದಟ್ಟವಾದ ಕಪ್ಪು ಹೊಗೆ ಹೊರಹೊಮ್ಮುವುದನ್ನು ಇದರಲ್ಲಿ ಕಾಣಬಹುದು. ಘಟನೆ ನಡೆದ ಸ್ಥಳಕ್ಕೆ ಚೀನಾ ಅಗ್ನಿಶಾಮಕ ದಳ ಧಾವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿಸಿದೆ.

ಅಸುರಕ್ಷತಾ ಮಾನದಂಡಗಳು ಮತ್ತು ಕಳಪೆ ಕಾಮಗಾರಿಯಿಂದ ಚೀನಾದಲ್ಲಿ ಕೈಗಾರಿಕಾ ಅಪಘಾತಗಳು ಸಾಮಾನ್ಯವಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ. ಜುಲೈನಲ್ಲಿ, ಚೀನಾದ ಈಶಾನ್ಯ ಭಾಗದ ಶಾಲೆಯ ಜಿಮ್‌ನ ಮೇಲ್ಛಾವಣಿ ಕುಸಿದು ಹನ್ನೊಂದು ಜನರು ಸಾವನ್ನಪ್ಪಿದರು. ಒಂದು ತಿಂಗಳ ಹಿಂದೆ, ವಾಯುವ್ಯ ಚೀನಾದಲ್ಲಿ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿ 31 ಜನರು ಸಾವನ್ನಪ್ಪಿದರು. ಹೀಗೆ ಅನೇಕ ಘಟನೆಗಳು ಚೀನಾದಲ್ಲಿ ನಡೆಯುತ್ತಿದೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ