AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಉಗ್ರದಾಳಿ, ಕಾರು ಬಾಂಬ್​ ಸ್ಫೋಟ; ಭದ್ರತಾ ಪಡೆಗಳ 11 ಸಿಬ್ಬಂದಿ ಸಾವು

ಅಫ್ಘಾನಿಸ್ತಾನದಿಂದ ತಮ್ಮ ಸೈನಿಕರನ್ನು ಹಿಂದಕ್ಕೆ ಕರೆತರುವ ಅಮೆರಿಕದ ನಿರ್ಧಾರವನ್ನು ಅನುಸರಿಸಿ, ಆಸ್ಟ್ರೇಲಿಯಾ ಕೂಡ ಅಲ್ಲಿಂದ ತಮ್ಮ ಸೈನಿಕರನ್ನು ಹಿಂಪಡೆಯಲು ತೀರ್ಮಾನಿಸಿದೆ.

ಅಫ್ಘಾನಿಸ್ತಾನದಲ್ಲಿ ಉಗ್ರದಾಳಿ, ಕಾರು ಬಾಂಬ್​ ಸ್ಫೋಟ; ಭದ್ರತಾ ಪಡೆಗಳ 11 ಸಿಬ್ಬಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 12, 2021 | 3:57 PM

Share

ಹೆಲ್ಮಂಡ್​: ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಭಾನುವಾರ ಬಾಂಬ್​ ದಾಳಿ ಮತ್ತು ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಎರಡೂ ದಾಳಿಗಳಿಂದ ಒಟ್ಟು ರಕ್ಷಣಾ ಪಡೆಯ 11 ಮಂದಿ ಮೃತಪಟ್ಟಿದ್ದಾರೆ ಎಂದು ಟೊಲೋ ನ್ಯೂಸ್​ ವರದಿ ಮಾಡಿದೆ. ನಾವಾ ಜಿಲ್ಲೆಯಲ್ಲಿ ನಡೆದ ಕಾರ್ ಬಾಂಬ್​ ದಾಳಿಯಲ್ಲಿ ಭದ್ರತಾ ಪಡೆಯ ಇಬ್ಬರು ಮೃತರಾಗಿದ್ದಾರೆ. ಹಾಗೇ, ಉಳಿದ 9 ಮಂದಿ ಹೆಲ್ಮಂಡ್​-ಕಂದಹಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಔಟ್​ಪೋಸ್ಟ್​ ಬಳಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಈ ಎರಡೂ ದಾಳಿಗಳ ಬಗ್ಗೆ ಅಫ್ಘಾನಿಸ್ತಾನ ರಕ್ಷಣಾ ಪಡೆಗಳು ಯಾವುದೇ ಅಧಿಕೃತ ಹೇಳಿಕೆಯನ್ನೂ ಬಿಡುಗಡೆ ಮಾಡಿಲ್ಲ. ಇನ್ನು ಅಫ್ಘಾನಿಸ್ತಾನದಿಂದ ತಮ್ಮ ಸೈನಿಕರನ್ನು ಹಿಂದಕ್ಕೆ ಕರೆತರುವ ಅಮೆರಿಕದ ನಿರ್ಧಾರವನ್ನು ಅನುಸರಿಸಿ, ಆಸ್ಟ್ರೇಲಿಯಾ ಕೂಡ ಅಲ್ಲಿಂದ ತಮ್ಮ ಸೈನಿಕರನ್ನು ಹಿಂಪಡೆಯಲು ತೀರ್ಮಾನಿಸಿದೆ.

ಜೂ.6ರಂದು ಅಫ್ಘಾನಿಸ್ತಾನದ ಉತ್ತರದಲ್ಲಿ ನೆಲಸ್ಫೋಟಗೊಂಡು ವಾಹನದಲ್ಲಿದ್ದ 11 ಮಂದಿ ಮೃತಪಟ್ಟಿದ್ದರು. ಈ ಸ್ಫೋಟದ ಹೊಣೆಯನ್ನು ತಾಲಿಬಾನ್​ ಸೇರಿ ಯಾವುದೇ ಉಗ್ರಸಂಘಟನೆಗಳೂ ಹೊತ್ತಿರಲಿಲ್ಲ. ಅದಕ್ಕೂ ಮೊದಲು ಮೇ ತಿಂಗಳಲ್ಲಿ ಕಾಬೂಲ್​​ನ ಶಾಲೆಯೊಂದರಲ್ಲಿ ನಡೆದ ಕಾರು ಬಾಂಬ್​ ಸ್ಫೋಟದಲ್ಲಿ 55ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: Delta, Kappa, Lambda Variant: ಡೆಲ್ಟಾ, ಕಪ್ಪಾ, ಲ್ಯಾಂಬ್ಡಾ ತಳಿಗಳ ನಡುವೆ ಇರುವ ವ್ಯತ್ಯಾಸವೇನು? ಒಂದಕ್ಕಿಂತ ಒಂದು ಭಿನ್ನ ಹೇಗೆ?

11 security personnel killed in terrorist attacks In Helmand Of Afghanistan

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್