AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್ ಗಡಿಯಲ್ಲಿ ಸೇಡಿನ ದಾಳಿ; ತಾಲಿಬಾನ್​​ನಿಂದ 12 ಪಾಕಿಸ್ತಾನಿ ಸೈನಿಕರ ಹತ್ಯೆ

ಶನಿವಾರ ತಡರಾತ್ರಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಯಿತು. ಈ ಭೀಕರ ಗಡಿ ಘರ್ಷಣೆಯಲ್ಲಿ 12 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ವೈಮಾನಿಕ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವಾಗಿ ತಾಲಿಬಾನ್ ಪಾಕಿಸ್ತಾನದ ಸೈನಿಕರನ್ನು ಹತ್ಯೆ ಮಾಡಿದೆ. ಇಬ್ಬರು ಪಾಕ್ ಸೈನಿಕರನ್ನು ಅಫ್ಘಾನ್ ಗಡಿಯಲ್ಲಿ ಸೆರೆಹಿಡಿಯಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಅಫ್ಘಾನ್ ಗಡಿಯಲ್ಲಿ ಸೇಡಿನ ದಾಳಿ; ತಾಲಿಬಾನ್​​ನಿಂದ 12 ಪಾಕಿಸ್ತಾನಿ ಸೈನಿಕರ ಹತ್ಯೆ
Taliban Attack On Pakistan
ಸುಷ್ಮಾ ಚಕ್ರೆ
|

Updated on: Oct 12, 2025 | 8:16 AM

Share

ನವದೆಹಲಿ, ಅಕ್ಟೋಬರ್ 12: ಅಫ್ಘಾನ್ ಮತ್ತು ಪಾಕಿಸ್ತಾನಿ ಸೈನಿಕರ ನಡುವಿನ ಪ್ರಮುಖ ಗಡಿ ಘರ್ಷಣೆಯಲ್ಲಿ 12 ಪಾಕಿಸ್ತಾನಿ (Pakistan) ಸೈನಿಕರು ಸಾವನ್ನಪ್ಪಿದ್ದಾರೆ. ಡುರಾಂಡ್ ಲೈನ್ ಬಾರ್ಡರ್​​ನಲ್ಲಿ ಈ ಘರ್ಷಣೆ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ (Afghanistan) ಪಾಕಿಸ್ತಾನಿ ಮಿಲಿಟರಿ ನಡೆಸಿದ ದಾಳಿಗೆ ಅಫ್ಘಾನ್ ಪಡೆಗಳು ನೀಡಿದ ಪ್ರತಿಕ್ರಿಯೆಯಾಗಿ ಈ ಹಿಂಸಾತ್ಮಕ ಘರ್ಷಣೆ ನಡೆದಿದೆ ಎನ್ನಲಾಗಿದೆ. ಕಾಬೂಲ್​ನಲ್ಲಿ ಪಾಕಿಸ್ತಾನದ ನಡೆಸಿದ್ದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಈ ದಾಳಿ ನಡೆಸಿದ್ದು, ಈ ಸಂಘರ್ಷದಲ್ಲಿ ತಮಗೆ ಗೆಲುವು ಸಿಕ್ಕಿದೆ ಎಂದು ತಾಲಿಬಾನ್ ಹೇಳಿಕೊಂಡಿದೆ.

“ಕುನಾರ್ ಮತ್ತು ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಡುರಾಂಡ್ ರೇಖೆಯ ಸುತ್ತ ಪಾಕಿಸ್ತಾನಿ ಸೇನೆಯಿಂದ ಹಲವಾರು ಹೊರಠಾಣೆಗಳನ್ನು ತಾಲಿಬಾನ್ ಪಡೆಗಳು ವಶಪಡಿಸಿಕೊಂಡಿವೆ” ಎಂದು ಅಫ್ಘಾನ್ ರಕ್ಷಣಾ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೇರೆಯವರನ್ನು ಬೆದರಿಸಲು ನಮ್ಮ ಪ್ರದೇಶ ಬಳಸಲು ಯಾರಿಗೂ ಅವಕಾಶ ನೀಡವುದಿಲ್ಲ, ಪಾಕ್​ಗೆ ಭಾರತ, ಅಫ್ಘಾನಿಸ್ತಾನ ಎಚ್ಚರಿಕೆ

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದ್ದು, ಗಡಿ ಘರ್ಷಣೆ ಸಂಭವಿಸಿದೆ. ಅಕ್ಟೋಬರ್ 9ರಂದು ಪಾಕಿಸ್ತಾನವು ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯಗಳಲ್ಲಿ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ನ ಹಿರಿಯ ಕಮಾಂಡರ್‌ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿತು. ಇದರಲ್ಲಿ ಟಿಟಿಪಿ ನಾಯಕ ನೂರ್ ವಾಲಿ ಮೆಹ್ಸೂದ್ ಮೇಲೂ ದಾಳಿ ನಡೆಸಲಾಗಿತ್ತು.

ಈ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ, ಅಫ್ಘಾನ್ ಪಡೆಗಳು ಡುರಾಂಡ್ ರೇಖೆಯ ಬಳಿಯ ಪಾಕಿಸ್ತಾನಿ ಮಿಲಿಟರಿ ಪೋಸ್ಟ್‌ಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದವು. ಅಫ್ಘಾನ್ ಪಡೆಗಳು ನಂಗರ್ಹಾರ್ ಮತ್ತು ಕುನಾರ್ ಪ್ರಾಂತ್ಯಗಳಲ್ಲಿನ ಹಲವಾರು ಪಾಕಿಸ್ತಾನಿ ಹೊರಠಾಣೆಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿವೆ. “ಇಂದು ರಾತ್ರಿಯ ದಾಳಿಯಲ್ಲಿ ಪಾಕಿಸ್ತಾನಿ ಕಡೆಯ ಸೌಲಭ್ಯಗಳು ಮತ್ತು ಉಪಕರಣಗಳು ನಾಶವಾದವು” ಎಂದು ನಿನ್ನೆ ಮಧ್ಯರಾತ್ರಿ ಅಫ್ಘಾನ್ ರಕ್ಷಣಾ ಸಚಿವಾಲಯ ಹೇಳಿಕೊಂಡಿದೆ.

ಇದನ್ನೂ ಓದಿ: Video: ಪಾಕಿಸ್ತಾನದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ, 7 ಪೊಲೀಸರು, 6 ಉಗ್ರರು ಸಾವು

ಈ ಘರ್ಷಣೆಯ ಸಮಯದಲ್ಲಿ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳು ಮತ್ತು ಉಪಕರಣಗಳು ನಾಶವಾದವು, ಪಾಕಿಸ್ತಾನದ ಕಡೆಯಿಂದ ಗಮನಾರ್ಹ ಸಾವುನೋವುಗಳು ಸಂಭವಿಸಿವೆ ಎಂದು ಅಫಘಾನ್ ರಕ್ಷಣಾ ಸಚಿವಾಲಯದ ಮೂಲಗಳು ಹೇಳಿವೆ. ಘಟನೆಯ ಕುರಿತು ಪಾಕಿಸ್ತಾನಿ ಮಿಲಿಟರಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!