AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ 13 ನಾಗರಿಕರು ಬಲಿ

ಆಡಳಿತ ಸಂಸ್ಥೆಯ ಕಟ್ಟಡಗಳು ಹಾನಿಗೀಡಾಗಿವೆ ಬಹುಮಹಡಿ ಕಟ್ಟಡಗಳು, ಶಾಲೆ, ಸಾಂಸ್ಕೃತಿಕ ಅರಮನೆ, ನಗರ ಸಭೆ ಕಟ್ಟಡಕ್ಕೆ ಹಾನಿಯಾಗಿದೆ. ಪಟ್ಟಣದಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ

ಮಧ್ಯ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ 13 ನಾಗರಿಕರು ಬಲಿ
ಉಕ್ರೇನ್ ಆಸ್ಪತ್ರೆಯಲ್ಲಿನ ದೃಶ್ಯImage Credit source: AP
TV9 Web
| Edited By: |

Updated on:Aug 10, 2022 | 2:06 PM

Share

ಕೈವ್: ಮಧ್ಯ ಉಕ್ರೇನ್‌ನ (Ukraine) ಡ್ನಿಪ್ರೊಪೆಟ್ರೋವ್ಸ್ಕ್ (Dnipropetrovsk) ಪ್ರದೇಶದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ 13 ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಗವರ್ನರ್ ಬುಧವಾರ ತಿಳಿಸಿದ್ದಾರೆ. ಇದು ಭಯಾನಕ ರಾತ್ರಿ ಆಗಿತ್ತು 11 ಜನರ ಹತ್ಯೆಯಾಗಿದೆ ಎಂದು ವ್ಯಾಲೆಂಟಿನ್ ರೆಜ್ನಿಚೆಂಕೊ ಟೆಲಿಗ್ರಾಮ್ ನಲ್ಲಿ ಬರೆದಿದ್ದಾರೆ. ಇನ್ನೊಂದು ಪೋಸ್ಟ್​​ನಲ್ಲಿ ಅವರು ಮತ್ತಿಬ್ಬರು ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಝಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರದಿಂದ ಡ್ನೀಪರ್ ನದಿಯ ಇನ್ನೊಂದು ಬದಿಯಲ್ಲಿ ಮಾರ್ಗನೆಟ್ಸ್ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಹನ್ನೆರಡು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಾದೇಶಿಕ ಕೌನ್ಸಿಲ್ ಮುಖ್ಯಸ್ಥ ಮೈಕೋಲಾ ಲುಕಾಶುಕ್ ಹೇಳಿದ್ದಾರೆ. ಆಡಳಿತ ಸಂಸ್ಥೆಯ ಕಟ್ಟಡಗಳು ಹಾನಿಗೀಡಾಗಿವೆ ಬಹುಮಹಡಿ ಕಟ್ಟಡಗಳು, ಶಾಲೆ, ಸಾಂಸ್ಕೃತಿಕ ಅರಮನೆ, ನಗರ ಸಭೆ ಕಟ್ಟಡಕ್ಕೆ ಹಾನಿಯಾಗಿದೆ. ಪಟ್ಟಣದಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ವಾಯುದಾಳಿ ಸೈರನ್‌ಗಳನ್ನು ಗಮನಿಸಿ ಮತ್ತು ಆಶ್ರಯವನ್ನು ಕಂಡುಕೊಳ್ಳಿ ಎಂದು ರೆಜ್ನಿಚೆಂಕೊ ನಿವಾಸಿಗಳಿಗೆ ಒತ್ತಾಯಿಸಿದ್ದಾರೆ. “ನಾನು ನಿಮ್ಮಲ್ಲಿ ಕೇಳುತ್ತಿದ್ದೇನೆ ಮತ್ತು ಬೇಡಿಕೊಳ್ಳುತ್ತಿದ್ದೇನೆ … ರಷ್ಯನ್ನರು ನಿಮ್ಮನ್ನು ಕೊಲ್ಲಲು ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಯುರೋಪ್‌ನ ಅತಿದೊಡ್ಡ ಝಪೋರಿಝಿಯಾ ಸ್ಥಾವರವನ್ನು ರಷ್ಯಾದ ಪಡೆಗಳು ಆಕ್ರಮಿಸಿಕೊಂಡಿದ್ದು ಇದೀಗ ಹೋರಾಟದ ಕೇಂದ್ರವಾಗಿದೆ. ರಷ್ಯಾ ಮತ್ತು ಉಕ್ರೇನ್ ಸ್ಥಾವರದ ಬಳಿ ಶೆಲ್ ದಾಳಿ ನಡೆಸುತ್ತಿದೆ ಎಂದು ಪರಸ್ಪರ ಆರೋಪಿಸಿವೆ. ಮಾಸ್ಕೋ ಇದನ್ನು ಉಕ್ರೇನಿಯನ್ ಪಡೆಗಳಿಂದ ರಕ್ಷಿಸಲು ಪಡೆಗಳು ಮತ್ತು ಮದ್ದುಗುಂಡುಗಳ ನೆಲೆಯಾಗಿ ಬಳಸುತ್ತಿದೆ ಎಂದು ಕೈವ್ ಆರೋಪಿಸಿದೆ.

ಹೆಚ್ಚಿನ ವಿದೇಶ  ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published On - 1:50 pm, Wed, 10 August 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ