AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ 13 ನಾಗರಿಕರು ಬಲಿ

ಆಡಳಿತ ಸಂಸ್ಥೆಯ ಕಟ್ಟಡಗಳು ಹಾನಿಗೀಡಾಗಿವೆ ಬಹುಮಹಡಿ ಕಟ್ಟಡಗಳು, ಶಾಲೆ, ಸಾಂಸ್ಕೃತಿಕ ಅರಮನೆ, ನಗರ ಸಭೆ ಕಟ್ಟಡಕ್ಕೆ ಹಾನಿಯಾಗಿದೆ. ಪಟ್ಟಣದಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ

ಮಧ್ಯ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ 13 ನಾಗರಿಕರು ಬಲಿ
ಉಕ್ರೇನ್ ಆಸ್ಪತ್ರೆಯಲ್ಲಿನ ದೃಶ್ಯImage Credit source: AP
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 10, 2022 | 2:06 PM

Share

ಕೈವ್: ಮಧ್ಯ ಉಕ್ರೇನ್‌ನ (Ukraine) ಡ್ನಿಪ್ರೊಪೆಟ್ರೋವ್ಸ್ಕ್ (Dnipropetrovsk) ಪ್ರದೇಶದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ 13 ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಗವರ್ನರ್ ಬುಧವಾರ ತಿಳಿಸಿದ್ದಾರೆ. ಇದು ಭಯಾನಕ ರಾತ್ರಿ ಆಗಿತ್ತು 11 ಜನರ ಹತ್ಯೆಯಾಗಿದೆ ಎಂದು ವ್ಯಾಲೆಂಟಿನ್ ರೆಜ್ನಿಚೆಂಕೊ ಟೆಲಿಗ್ರಾಮ್ ನಲ್ಲಿ ಬರೆದಿದ್ದಾರೆ. ಇನ್ನೊಂದು ಪೋಸ್ಟ್​​ನಲ್ಲಿ ಅವರು ಮತ್ತಿಬ್ಬರು ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಝಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರದಿಂದ ಡ್ನೀಪರ್ ನದಿಯ ಇನ್ನೊಂದು ಬದಿಯಲ್ಲಿ ಮಾರ್ಗನೆಟ್ಸ್ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಹನ್ನೆರಡು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಾದೇಶಿಕ ಕೌನ್ಸಿಲ್ ಮುಖ್ಯಸ್ಥ ಮೈಕೋಲಾ ಲುಕಾಶುಕ್ ಹೇಳಿದ್ದಾರೆ. ಆಡಳಿತ ಸಂಸ್ಥೆಯ ಕಟ್ಟಡಗಳು ಹಾನಿಗೀಡಾಗಿವೆ ಬಹುಮಹಡಿ ಕಟ್ಟಡಗಳು, ಶಾಲೆ, ಸಾಂಸ್ಕೃತಿಕ ಅರಮನೆ, ನಗರ ಸಭೆ ಕಟ್ಟಡಕ್ಕೆ ಹಾನಿಯಾಗಿದೆ. ಪಟ್ಟಣದಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ವಾಯುದಾಳಿ ಸೈರನ್‌ಗಳನ್ನು ಗಮನಿಸಿ ಮತ್ತು ಆಶ್ರಯವನ್ನು ಕಂಡುಕೊಳ್ಳಿ ಎಂದು ರೆಜ್ನಿಚೆಂಕೊ ನಿವಾಸಿಗಳಿಗೆ ಒತ್ತಾಯಿಸಿದ್ದಾರೆ. “ನಾನು ನಿಮ್ಮಲ್ಲಿ ಕೇಳುತ್ತಿದ್ದೇನೆ ಮತ್ತು ಬೇಡಿಕೊಳ್ಳುತ್ತಿದ್ದೇನೆ … ರಷ್ಯನ್ನರು ನಿಮ್ಮನ್ನು ಕೊಲ್ಲಲು ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಯುರೋಪ್‌ನ ಅತಿದೊಡ್ಡ ಝಪೋರಿಝಿಯಾ ಸ್ಥಾವರವನ್ನು ರಷ್ಯಾದ ಪಡೆಗಳು ಆಕ್ರಮಿಸಿಕೊಂಡಿದ್ದು ಇದೀಗ ಹೋರಾಟದ ಕೇಂದ್ರವಾಗಿದೆ. ರಷ್ಯಾ ಮತ್ತು ಉಕ್ರೇನ್ ಸ್ಥಾವರದ ಬಳಿ ಶೆಲ್ ದಾಳಿ ನಡೆಸುತ್ತಿದೆ ಎಂದು ಪರಸ್ಪರ ಆರೋಪಿಸಿವೆ. ಮಾಸ್ಕೋ ಇದನ್ನು ಉಕ್ರೇನಿಯನ್ ಪಡೆಗಳಿಂದ ರಕ್ಷಿಸಲು ಪಡೆಗಳು ಮತ್ತು ಮದ್ದುಗುಂಡುಗಳ ನೆಲೆಯಾಗಿ ಬಳಸುತ್ತಿದೆ ಎಂದು ಕೈವ್ ಆರೋಪಿಸಿದೆ.

ಹೆಚ್ಚಿನ ವಿದೇಶ  ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published On - 1:50 pm, Wed, 10 August 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?