AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ

ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರImage Credit source: India Today
TV9 Web
| Edited By: |

Updated on: Aug 05, 2022 | 8:58 AM

Share

ಬ್ಯಾಂಕಾಕ್: ಥಾಯ್ಲೆಂಡ್​​ನ (Thailand) ನೈಟ್‌ ಕ್ಲಬ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು, 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್‌ನಿಂದ ದಕ್ಷಿಣಕ್ಕೆ 150 ಕಿ.ಮೀ. ದೂರದಲ್ಲಿರುವ ಚೋನ್‌ಬುರಿ ಪ್ರಾಂತ್ಯದ ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್‌ ಕ್ಲಬ್​ನಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ಬೆಂಕಿ (Fire Accident) ಕಾಣಿಸಿಕೊಂಡಿದೆ ಎಂದು ಸಾವಾಂಗ್ ರೋಜನಾಥಮ್ಮಸಾತನ್ ಪಾರುಗಾಣಿಕಾ ಫೌಂಡೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಸ್ಕ್ಯೂ ಸರ್ವಿಸ್ ಪೋಸ್ಟ್ ಮಾಡಿದ ವಿಡಿಯೋ ತುಣುಕೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸುಮಾರು 3 ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಹಿಂದೆ 2009ರಲ್ಲಿ ಬ್ಯಾಂಕಾಕ್‌ನ ಸ್ವಾಂಕಿ ಸ್ಯಾಂಟಿಕಾ ಕ್ಲಬ್‌ನಲ್ಲಿ ಹೊಸ ವರ್ಷದ ಮೊದಲ ದಿನದ ಪಾರ್ಟಿಯಲ್ಲಿ ಭಾರೀ ಸ್ಫೋಟ ಉಂಟಾಗಿತ್ತು. ಈ ಘಟನೆಯಲ್ಲಿ 67 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಬರ್ನ್ ಎಂಬ ರಾಕ್ ಬ್ಯಾಂಡ್ ವೇದಿಕೆಯಲ್ಲಿ ಕಾರ್ಯಕ್ರಮ ನೀಡುವಾಗ ಬೆಂಕಿ ಪ್ರಾರಂಭವಾಯಿತು. ಸ್ಯಾಂಟಿಕಾ ಕ್ಲಬ್ ಮಾಲೀಕರಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚೆಗಷ್ಟೇ 2012ರಲ್ಲಿ ವಿದೇಶಿ ಪ್ರವಾಸಿಗರಿಗೆ ಆಯಸ್ಕಾಂತವಾದ ಫುಕೆಟ್ ದ್ವೀಪದ ಕ್ಲಬ್‌ನಲ್ಲಿ ವಿದ್ಯುತ್ ದೋಷದಿಂದ ಉಂಟಾದ ಬೆಂಕಿಯಲ್ಲಿ 4 ಜನರು ಸಾವನ್ನಪ್ಪಿದ್ದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್