AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ

ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರImage Credit source: India Today
TV9 Web
| Edited By: |

Updated on: Aug 05, 2022 | 8:58 AM

Share

ಬ್ಯಾಂಕಾಕ್: ಥಾಯ್ಲೆಂಡ್​​ನ (Thailand) ನೈಟ್‌ ಕ್ಲಬ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು, 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್‌ನಿಂದ ದಕ್ಷಿಣಕ್ಕೆ 150 ಕಿ.ಮೀ. ದೂರದಲ್ಲಿರುವ ಚೋನ್‌ಬುರಿ ಪ್ರಾಂತ್ಯದ ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್‌ ಕ್ಲಬ್​ನಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ಬೆಂಕಿ (Fire Accident) ಕಾಣಿಸಿಕೊಂಡಿದೆ ಎಂದು ಸಾವಾಂಗ್ ರೋಜನಾಥಮ್ಮಸಾತನ್ ಪಾರುಗಾಣಿಕಾ ಫೌಂಡೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಸ್ಕ್ಯೂ ಸರ್ವಿಸ್ ಪೋಸ್ಟ್ ಮಾಡಿದ ವಿಡಿಯೋ ತುಣುಕೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸುಮಾರು 3 ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಹಿಂದೆ 2009ರಲ್ಲಿ ಬ್ಯಾಂಕಾಕ್‌ನ ಸ್ವಾಂಕಿ ಸ್ಯಾಂಟಿಕಾ ಕ್ಲಬ್‌ನಲ್ಲಿ ಹೊಸ ವರ್ಷದ ಮೊದಲ ದಿನದ ಪಾರ್ಟಿಯಲ್ಲಿ ಭಾರೀ ಸ್ಫೋಟ ಉಂಟಾಗಿತ್ತು. ಈ ಘಟನೆಯಲ್ಲಿ 67 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಬರ್ನ್ ಎಂಬ ರಾಕ್ ಬ್ಯಾಂಡ್ ವೇದಿಕೆಯಲ್ಲಿ ಕಾರ್ಯಕ್ರಮ ನೀಡುವಾಗ ಬೆಂಕಿ ಪ್ರಾರಂಭವಾಯಿತು. ಸ್ಯಾಂಟಿಕಾ ಕ್ಲಬ್ ಮಾಲೀಕರಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚೆಗಷ್ಟೇ 2012ರಲ್ಲಿ ವಿದೇಶಿ ಪ್ರವಾಸಿಗರಿಗೆ ಆಯಸ್ಕಾಂತವಾದ ಫುಕೆಟ್ ದ್ವೀಪದ ಕ್ಲಬ್‌ನಲ್ಲಿ ವಿದ್ಯುತ್ ದೋಷದಿಂದ ಉಂಟಾದ ಬೆಂಕಿಯಲ್ಲಿ 4 ಜನರು ಸಾವನ್ನಪ್ಪಿದ್ದರು.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’