AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ

ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಥಾಯ್ಲೆಂಡ್​​ನ ನೈಟ್​ ಕ್ಲಬ್​ನಲ್ಲಿ ಬೆಂಕಿ ಅವಘಡ; 13 ಜನ ಸಾವು, 40 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರImage Credit source: India Today
TV9 Web
| Edited By: |

Updated on: Aug 05, 2022 | 8:58 AM

Share

ಬ್ಯಾಂಕಾಕ್: ಥಾಯ್ಲೆಂಡ್​​ನ (Thailand) ನೈಟ್‌ ಕ್ಲಬ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು, 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬ್ಯಾಂಕಾಕ್‌ನಿಂದ ದಕ್ಷಿಣಕ್ಕೆ 150 ಕಿ.ಮೀ. ದೂರದಲ್ಲಿರುವ ಚೋನ್‌ಬುರಿ ಪ್ರಾಂತ್ಯದ ಸತ್ತಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್‌ ಕ್ಲಬ್​ನಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ಬೆಂಕಿ (Fire Accident) ಕಾಣಿಸಿಕೊಂಡಿದೆ ಎಂದು ಸಾವಾಂಗ್ ರೋಜನಾಥಮ್ಮಸಾತನ್ ಪಾರುಗಾಣಿಕಾ ಫೌಂಡೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಸ್ಕ್ಯೂ ಸರ್ವಿಸ್ ಪೋಸ್ಟ್ ಮಾಡಿದ ವಿಡಿಯೋ ತುಣುಕೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ನೈಟ್ ಕ್ಲಬ್‌ನಿಂದ ಕಿರುಚುತ್ತಾ ಓಡಿಹೋಗುತ್ತಿರುವುದನ್ನು ನೋಡಬಹುದು. ಈ ವೇಳೆ ನೈಟ್ ಕ್ಲಬ್​ನಲ್ಲಿದ್ದವರ ಬಟ್ಟೆಗಳು ಸುಟ್ಟುಹೋಗಿವೆ.

ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ; ಓರ್ವ ಸಾವು, 11 ಜನರಿಗೆ ಗಾಯ

ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸುಮಾರು 3 ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಹಿಂದೆ 2009ರಲ್ಲಿ ಬ್ಯಾಂಕಾಕ್‌ನ ಸ್ವಾಂಕಿ ಸ್ಯಾಂಟಿಕಾ ಕ್ಲಬ್‌ನಲ್ಲಿ ಹೊಸ ವರ್ಷದ ಮೊದಲ ದಿನದ ಪಾರ್ಟಿಯಲ್ಲಿ ಭಾರೀ ಸ್ಫೋಟ ಉಂಟಾಗಿತ್ತು. ಈ ಘಟನೆಯಲ್ಲಿ 67 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಬರ್ನ್ ಎಂಬ ರಾಕ್ ಬ್ಯಾಂಡ್ ವೇದಿಕೆಯಲ್ಲಿ ಕಾರ್ಯಕ್ರಮ ನೀಡುವಾಗ ಬೆಂಕಿ ಪ್ರಾರಂಭವಾಯಿತು. ಸ್ಯಾಂಟಿಕಾ ಕ್ಲಬ್ ಮಾಲೀಕರಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚೆಗಷ್ಟೇ 2012ರಲ್ಲಿ ವಿದೇಶಿ ಪ್ರವಾಸಿಗರಿಗೆ ಆಯಸ್ಕಾಂತವಾದ ಫುಕೆಟ್ ದ್ವೀಪದ ಕ್ಲಬ್‌ನಲ್ಲಿ ವಿದ್ಯುತ್ ದೋಷದಿಂದ ಉಂಟಾದ ಬೆಂಕಿಯಲ್ಲಿ 4 ಜನರು ಸಾವನ್ನಪ್ಪಿದ್ದರು.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ