AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 5 ಮಂದಿ ಸಾವು, 13 ಜನರಿಗೆ ಗಾಯ

ಇಂದು ಮುಂಜಾನೆ 8.30ರ ಹೊತ್ತಿಗೆ (ಅಲ್ಲಿನ ಸಮಯ) ಈ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಘಟನೆ ನಡೆದ ಸ್ಥಳಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ರೈಲುಗಳ ಸಂಚಾರವೂ ಸ್ಥಗಿತಗೊಂಡಿತ್ತು.

ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 5 ಮಂದಿ ಸಾವು, 13 ಜನರಿಗೆ ಗಾಯ
ಘಟನೆ ನಡೆದ ಸ್ಥಳ
TV9 Web
| Updated By: Lakshmi Hegde|

Updated on:Apr 12, 2022 | 8:26 PM

Share

ನ್ಯೂಯಾರ್ಕ್​​ನ ಬ್ರೂಕ್ಲಿನ್​ ನಗರದಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಐವರು ಮೃತಪಟ್ಟಿದ್ದು, 13 ಜನರು ಗಾಯಗೊಂಡಿದ್ದಾರೆ. ಇದು ಬ್ರೂಕ್ಲಿನ್​​ನಲ್ಲಿರುವ ರೈಲು ಸುರಂಗ ಮಾರ್ಗವೊಂದರ ಸ್ಟೇಶನ್​​​ಗಳಲ್ಲಿ ನಡೆದಿದ್ದು, ಆರೋಪಿ ಮುಖಕ್ಕೆ ಗ್ಯಾಸ್ ಮಾಸ್ಕ್​ ಧರಿಸಿದ್ದ ಮತ್ತು ನಿರ್ಮಾಣ ಕಾಮಗಾರಿ ನಡೆಸುವವರು ಧರಿಸುವ ವೆಸ್ಟ್ ಕೋಟ್ ಹಾಕಿಕೊಂಡಿದ್ದ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.  ಸನ್​ಸೆಟ್​ ಪಾರ್ಕ್​​ನಲ್ಲಿರುವ 36ನೇ ಸ್ಟ್ರೀಟ್ ಸಬ್​ವೇ ಸ್ಟೇಶನ್​ನಲ್ಲಿ ನಾಲ್ವರಿಗೆ ಗುಂಡು ಹೊಡೆದ ಈತ ಗ್ರೀನ್​ವುಡ್​ ಹೈಟ್ಸ್​ನಲ್ಲಿರುವ 25ನೇ  ಸ್ಟೇಶನ್​​ನಲ್ಲಿ 9 ಮಂದಿಗೆ ಗುಂಡು ಹೊಡೆದಿದ್ದಾನೆ.

ಇಂದು ಮುಂಜಾನೆ 8.30ರ ಹೊತ್ತಿಗೆ (ಅಲ್ಲಿನ ಸಮಯ) ಈ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಘಟನೆ ನಡೆದ ಸ್ಥಳಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ರೈಲುಗಳ ಸಂಚಾರವೂ ಸ್ಥಗಿತಗೊಂಡಿತ್ತು ಎಂದು ಅಲ್ಲಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ.  ಈ ಬಗ್ಗೆ ನ್ಯೂಯಾರ್ಕ್ ಪೊಲೀಸ್ ಡಿಪಾರ್ಟ್​ಮೆಂಟ್​ (NYPD) ಟ್ವೀಟ್ ಮಾಡಿದ್ದು, ಸದ್ಯ ಗುಂಡಿನ ದಾಳಿ ನಡೆದ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಲಾಗಿದೆ. ತನಿಖೆ ಕಾರಣಕ್ಕೆ ಈ ನಿಯಮ ವಿಧಿಸಲಾಗಿದೆ. ತುರ್ತು ವಾಹನಗಳು ಮಾತ್ರ ಹೋಗಬಹುದು. ಸ್ಫೋಟಕಗಳು ಪತ್ತೆಯಾಗಿದ್ದರೂ ಕೂಡ ಅವು ನಿಷ್ಕ್ರಿಯವಾಗಿದ್ದವು ಎಂದು ತಿಳಿಸಿದ್ದಾರೆ. ಹಾಗೇ ಶೂಟೌಟ್​ ನಡೆದ ಬಳಿಕದ ದೃಶ್ಯಗಳೂ ವೈರಲ್ ಆಗಿವೆ.

ಇನ್ನೂ ಯಾರನ್ನೂ ಬಂಧಿಸಿಲ್ಲ. ಇದೊಂದು ಉಗ್ರರ ದಾಳಿ ಎಂಬುದನ್ನೂ ದೃಢಪಡಿಸಿಲ್ಲ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಗಾಯಾಗಳುಗಳು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸೋಷಿಯಲ್ ಮೀಡಿಯಾ ಬಳಕೆ ದಾರರು ಇದೊಂದು ಉಗ್ರ ಕೃತ್ಯ ಎಂದೇ ವಾದಿಸುತ್ತಿದ್ದಾರೆ.

ಇದನ್ನೂ ಓದಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​, ಹಣಕಾಸು ಸಚಿವ ರಿಶಿ ಸುನಕ್​ಗೆ ದಂಡ ವಿಧಿಸಿದ ಪೊಲೀಸರು; ನೋಟಿಸ್ ಕಳಿಸಲು ನಿರ್ಧಾರ

Published On - 7:58 pm, Tue, 12 April 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್