AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 5 ಮಂದಿ ಸಾವು, 13 ಜನರಿಗೆ ಗಾಯ

ಇಂದು ಮುಂಜಾನೆ 8.30ರ ಹೊತ್ತಿಗೆ (ಅಲ್ಲಿನ ಸಮಯ) ಈ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಘಟನೆ ನಡೆದ ಸ್ಥಳಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ರೈಲುಗಳ ಸಂಚಾರವೂ ಸ್ಥಗಿತಗೊಂಡಿತ್ತು.

ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 5 ಮಂದಿ ಸಾವು, 13 ಜನರಿಗೆ ಗಾಯ
ಘಟನೆ ನಡೆದ ಸ್ಥಳ
TV9 Web
| Edited By: |

Updated on:Apr 12, 2022 | 8:26 PM

Share

ನ್ಯೂಯಾರ್ಕ್​​ನ ಬ್ರೂಕ್ಲಿನ್​ ನಗರದಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಐವರು ಮೃತಪಟ್ಟಿದ್ದು, 13 ಜನರು ಗಾಯಗೊಂಡಿದ್ದಾರೆ. ಇದು ಬ್ರೂಕ್ಲಿನ್​​ನಲ್ಲಿರುವ ರೈಲು ಸುರಂಗ ಮಾರ್ಗವೊಂದರ ಸ್ಟೇಶನ್​​​ಗಳಲ್ಲಿ ನಡೆದಿದ್ದು, ಆರೋಪಿ ಮುಖಕ್ಕೆ ಗ್ಯಾಸ್ ಮಾಸ್ಕ್​ ಧರಿಸಿದ್ದ ಮತ್ತು ನಿರ್ಮಾಣ ಕಾಮಗಾರಿ ನಡೆಸುವವರು ಧರಿಸುವ ವೆಸ್ಟ್ ಕೋಟ್ ಹಾಕಿಕೊಂಡಿದ್ದ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.  ಸನ್​ಸೆಟ್​ ಪಾರ್ಕ್​​ನಲ್ಲಿರುವ 36ನೇ ಸ್ಟ್ರೀಟ್ ಸಬ್​ವೇ ಸ್ಟೇಶನ್​ನಲ್ಲಿ ನಾಲ್ವರಿಗೆ ಗುಂಡು ಹೊಡೆದ ಈತ ಗ್ರೀನ್​ವುಡ್​ ಹೈಟ್ಸ್​ನಲ್ಲಿರುವ 25ನೇ  ಸ್ಟೇಶನ್​​ನಲ್ಲಿ 9 ಮಂದಿಗೆ ಗುಂಡು ಹೊಡೆದಿದ್ದಾನೆ.

ಇಂದು ಮುಂಜಾನೆ 8.30ರ ಹೊತ್ತಿಗೆ (ಅಲ್ಲಿನ ಸಮಯ) ಈ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದು, ಘಟನೆ ನಡೆದ ಸ್ಥಳಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ರೈಲುಗಳ ಸಂಚಾರವೂ ಸ್ಥಗಿತಗೊಂಡಿತ್ತು ಎಂದು ಅಲ್ಲಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ.  ಈ ಬಗ್ಗೆ ನ್ಯೂಯಾರ್ಕ್ ಪೊಲೀಸ್ ಡಿಪಾರ್ಟ್​ಮೆಂಟ್​ (NYPD) ಟ್ವೀಟ್ ಮಾಡಿದ್ದು, ಸದ್ಯ ಗುಂಡಿನ ದಾಳಿ ನಡೆದ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಲಾಗಿದೆ. ತನಿಖೆ ಕಾರಣಕ್ಕೆ ಈ ನಿಯಮ ವಿಧಿಸಲಾಗಿದೆ. ತುರ್ತು ವಾಹನಗಳು ಮಾತ್ರ ಹೋಗಬಹುದು. ಸ್ಫೋಟಕಗಳು ಪತ್ತೆಯಾಗಿದ್ದರೂ ಕೂಡ ಅವು ನಿಷ್ಕ್ರಿಯವಾಗಿದ್ದವು ಎಂದು ತಿಳಿಸಿದ್ದಾರೆ. ಹಾಗೇ ಶೂಟೌಟ್​ ನಡೆದ ಬಳಿಕದ ದೃಶ್ಯಗಳೂ ವೈರಲ್ ಆಗಿವೆ.

ಇನ್ನೂ ಯಾರನ್ನೂ ಬಂಧಿಸಿಲ್ಲ. ಇದೊಂದು ಉಗ್ರರ ದಾಳಿ ಎಂಬುದನ್ನೂ ದೃಢಪಡಿಸಿಲ್ಲ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಗಾಯಾಗಳುಗಳು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸೋಷಿಯಲ್ ಮೀಡಿಯಾ ಬಳಕೆ ದಾರರು ಇದೊಂದು ಉಗ್ರ ಕೃತ್ಯ ಎಂದೇ ವಾದಿಸುತ್ತಿದ್ದಾರೆ.

ಇದನ್ನೂ ಓದಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​, ಹಣಕಾಸು ಸಚಿವ ರಿಶಿ ಸುನಕ್​ಗೆ ದಂಡ ವಿಧಿಸಿದ ಪೊಲೀಸರು; ನೋಟಿಸ್ ಕಳಿಸಲು ನಿರ್ಧಾರ

Published On - 7:58 pm, Tue, 12 April 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?