AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕೆನ್​ ಸಭೆ ಸಫಲ, ಭಾರತಕ್ಕೆ ನೆರವು ನೀಡಲು 135 ಸಿಇಓಗಳ ಒಪ್ಪಿಗೆ

ಅಮೇರಿಕದ ಅಧ್ಯಕ್ಷ ಜೋ ಬೈಡನ್​ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ಮುಗಿದ ನಂತರ ಅಮೇರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್​ 135 ಸಿಇಓಗಳ ಜೊತೆ ಸಭೆ ನಡೆಸಿದ್ದು ಫಲಪ್ರದವಾಗಿದೆ. ಅವರೆಲ್ಲ ಭಾರತಕ್ಕೆ ನೆರವು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕೆನ್​ ಸಭೆ ಸಫಲ, ಭಾರತಕ್ಕೆ ನೆರವು ನೀಡಲು 135 ಸಿಇಓಗಳ ಒಪ್ಪಿಗೆ
ಅಮೇರಿಕದ ವಿದೇಶಾಂಗ ಕಾರ್ಯದರ್ಶಿ, ಆ್ಯಂಟನಿ ಬ್ಲಿಂಕೆನ್​
ಡಾ. ಭಾಸ್ಕರ ಹೆಗಡೆ
|

Updated on:Apr 27, 2021 | 3:17 PM

Share

ಸೋಮವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೇರಿಕಾ ಅಧ್ಯಕ್ಷ ಕೋ ಬೈಡನ್ ನಡುವಿನ ಮಾತುಕತೆ ನಡೆದ ಕೆಲವೇ ಹೊತ್ತಿನಲ್ಲಿ ನಡೆದ ಅಮೇರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಮತ್ತು 135 ಪ್ರಮುಖ ಕಂಪೆನಿಗಳ ಸಿಇಓಗಳ ಸಭೆಯಲ್ಲಿ, ಭಾರತಕ್ಕೆ ಅಮೇರಿಕದ ಖಾಸಗೀ ವಲಯದಿಂದ ಕೂಡ ನೆರವು ನೀಡಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಸರು ಹೇಳಲು ಇಚ್ಛಿಸದ ಓರ್ವ ಸಿಇಓ ಅವರು ಟಿವಿ9 ಡಿಜಿಟಲ್​ಗೆ ಸಭೆಯ ವಿವರವನ್ನು ನೀಡಿದ್ದಾರೆ.

ಸಭೆಯಲ್ಲಿ ಏನು ನಡೆಯಿತು?

ಭಾರತದಲ್ಲಿನ ಪರಿಸ್ಥಿತಿಗೆ ಸ್ಪಂದಿಸಲು ಅಮೇರಿಕದ ಸರಕಾರ ತಡವಾಗಿರಬಹುದು. ಆದರೆ, ಈಗ ಅಮೇರಿಕಾ ಸರಕಾರ ಮಾತ್ರವಲ್ಲ, ಇಡೀ ನಾಗರಿಕ ಜಗತ್ತು ಭಾರತಕ್ಕೆ ಸಹಾಯ ಹಸ್ತ ನೀಡಲು ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ. ಅಮೇರಿಕದ ಸೇನೆ ಮತ್ತು ವಿದೇಶಾಂಗ ಇಲಾಖೆಯು ಔಷಧ ಮತ್ತು ಇನ್ನತರೇ ಉಪಕರಣ ನೀಡುವುದು ನಿರ್ಧಾರವಾಗಿದೆ. ಯುಪಿಎಸ್, ಯುನೈಟೆಡ್ ಮತ್ತು ಡೆಲ್ಟಾ ಏರ್ಲೈನ್ಸ್ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಭಾರತಕ್ಕೆ ಸಹಾಯ ಕೊಂಡೊಯ್ಯಲು ಮುಂದಾಗಿವೆ. ಅಮೆಜಾನ್ ವೆಂಟಿಲೇಟರ್ ವಿತರಣೆಯನ್ನು ನೋಡಿಕೊಳ್ಳುತ್ತಿದೆ. ಗೂಗಲ್, ಐಬಿಎಂ, ಜೆಪಿ ಮೋರ್ಗಾನ್, ನುವೀನ್ ಲ್ಯಾಬ್ಸ್, ಫೆಡ್ಎಕ್ಸ್, ವಾಲ್ಮಾರ್ಟ್, ಕೋಕ್, ಜೆ & ಜೆ, ಫಿಜರ್ ಮುಂತಾದ ಕಂಪೆನಿಗಳಿಗೆ ಒಂದು ವಿಚಾರ ಗೊತ್ತಿದೆ. ಅದೇನೆಂದರೆ ಭಾರತದಲ್ಲಿನ ತಮ್ಮ ಪ್ರಭಾವವು ಪ್ರಪಂಚದ ಮೇಲೆ ಕೂಡ ಪರಿಣಾಮ ಬೀರುತ್ತದೆ ಮತ್ತು ಸಂದೇಶ ಹೋಗುತ್ತದೆ ಎಂದು. ಹಲವಾರು ಮೊಬೈಲ್ ಮಿಲಿಟರಿ ಆಸ್ಪತ್ರೆಗಳನ್ನು ಅದು ಕಳುಹಿಸುತ್ತಿದೆ. ಇಂದಿನ ಸಭೆಯಲ್ಲಿ ಪಾಲ್ಗೊಂಡ ನಂತರ ನನಗನ್ನಿಸಿದ್ದೇನೆಂದರೆ, ಅಮೇರಿಕ ಭಾರಿ ಪ್ರಮಾಣದಲ್ಲಿ ಸಹಾಯವನ್ನು ನೀಡುತ್ತಿದೆ. ಈಗ ನಾನು ಹೇಗೆ ಮಾತನಾಡುತ್ತದ್ದೇನೋ, ಅಷ್ಟೇ ಪ್ರಮಾಣದಲ್ಲಿ ನೆರವು ರವಾನೆ ಆಗುವುದು ಖಂಡಿತ. ಭಾರತದಲ್ಲಿ ಲಸಿಕೆಗಳನ್ನು ತಯಾರಿಸಲು ಬೇಕಾಗುವ ಕಚ್ಚಾ ಸಾಮಗ್ರಿಗಳನ್ನು ರವಾನಿಸಲಾಗುತ್ತಿದೆ. ಯುದ್ಧಭೂಮಿ ಆಸ್ಪತ್ರೆಗಳಲ್ಲಿರುವ ಆಕ್ಸಿಜನ್ ಉಪಕರಣಗಳ ಹೆಚ್ಚುವರಿ ಸಂಗ್ರಹವನ್ನು ಭಾರತಕ್ಕೆ ಕಳಿಸಲಾಗುತ್ತಿದೆ. ಲಾಕ್ಹೀಡ್ ಮಾರ್ಟಿನ್ ಭಾರತದ ಸಣ್ಣ ಪಟ್ಟಣಗಳಿಗೆ ಉಪಕರಣಗಳನ್ನು ಸಾಗಿಸಲು ಹೆಲಿಕಾಪ್ಟರ್ ಮತ್ತು ಸರಕು ವಿಮಾನಗಳನ್ನು ಕಳುಹಿಸುತ್ತಿದ್ದಾರೆ. ಅನೇಕ ಸಂಸ್ಥೆಗಳು ಭಾರತದಲ್ಲಿರುವ ತಮ್ಮ ಖಾಲಿ ಕಚೇರಿಗಳನ್ನು ಲಸಿಕೆ ಕೇಂದ್ರಗಳಾಗಿ ಬಳಸಲು ಅನುಮತಿ ನೀಡಿವೆ. ಈ ನಂಬಲಾಗದ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಸಹಾಯಕ್ಕೆ ನಿಲ್ಲಲು ತನಗೆ ಹೃದಯವಿದೆ ಎಂದು ಅಮೆರಿಕ ತೋರಿಸುತ್ತದೆ. ನಾನು ಈ ಮೊದಲು ಇಂತಹ ಸಾರ್ವಜನಿಕ-ಖಾಸಗಿ ಸಮನ್ವಯವನ್ನು ನೋಡಿರಲಿಲ್ಲ. ಯುಎಸ್ ಸರ್ಕಾರವು ತನ್ನ ಶಕ್ತಿ ಮತ್ತು ಆರ್ಥಿಕ ಸಂಪನ್ಮೂಲವನ್ನು ಸಂಪೂರ್ಣವಾಗಿ ಭಾರತಕ್ಕೆ ನೀಡಲು ಮುಂದಾಗಿದೆ. ಕೋವಿಡ್ ಹರಡುವಿಕೆಯನ್ನು ನಿಲ್ಲಿಸಲೇಬೇಕಾಗಿದೆ, ಇಲ್ಲವಾದಲ್ಲಿ ಮೇ ಅಂತ್ಯದ ವೇಳೆಗೆ ಭಾರತದಲ್ಲಿ ರೂಪಾಂತರಗೊಂಡ ವೈರಸ್ ಪ್ರಪಂಚದಾದ್ಯಂತ ಹರಡುತ್ತದೆ. ಇದನ್ನು ನಿಲ್ಲಿಸಲು ಏನೆಲ್ಲಾ ಮಾಡಬೇಕೋ ಅದಕ್ಕೆ ನಅವು ಕೈ ಜೋಡಿಸಲು ನಿರ್ಧರಿಸಿದ್ದೇವೆ ಎಂದು ಹೆಸರು ಹೇಳಲಿಚ್ಚಿಸದ ಸಿಇಓ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಮೊದಲ ಮಾತುಕತೆ: ನೂತನ ವರ್ಷಕ್ಕೆ ಶುಭ ಕೋರಿ ಚೀನಾ ಕಿವಿ ಹಿಂಡಿದ ಜೋ ಬೈಡೆನ್

(135 CEOs agreed to help India in a meeting held by US state secretary Antony Blinken)

Published On - 3:09 pm, Tue, 27 April 21

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!