AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಅಗ್ನಿ ದುರಂತ; ಲಾಜಿಸ್ಟಿಕ್​ ಗೋದಾಮಿಗೆ ಹೊತ್ತಿಕೊಂಡ ಬೆಂಕಿಗೆ 14 ಜನ ಬಲಿ, 26ಕ್ಕೂ ಹೆಚ್ಚು ಮಂದಿಗೆ ಗಾಯ

ಅಗ್ನಿ ದುರಂತದ, ರಕ್ಷಣಾ ಕಾರ್ಯಾಚರಣೆಯ ಅನೇಕ ಫೋಟೋಗಳು ಚೀನಾ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಆದರೆ ಈ ಲಾಜಿಸ್ಟಿಕ್​ ಗೋದಾಮಿಗೆ ಬೆಂಕಿ ತಗುಲಲು ಕಾರಣವೇನೆಂಬುದಿನ್ನೂ ಸ್ಪಷ್ಟವಾಗಿಲ್ಲ.

ಚೀನಾದಲ್ಲಿ ಅಗ್ನಿ ದುರಂತ; ಲಾಜಿಸ್ಟಿಕ್​ ಗೋದಾಮಿಗೆ ಹೊತ್ತಿಕೊಂಡ ಬೆಂಕಿಗೆ 14 ಜನ ಬಲಿ, 26ಕ್ಕೂ ಹೆಚ್ಚು ಮಂದಿಗೆ ಗಾಯ
ಚೀನಾದ ಬೆಂಕಿ ದುರಂತದ ಚಿತ್ರ
TV9 Web
| Edited By: |

Updated on: Jul 25, 2021 | 11:51 AM

Share

ಬೀಜಿಂಗ್​: ಚೀನಾದ ಮಧ್ಯಪ್ರಾಂತ್ಯ ಹೆನಾನ್​ ಪ್ರವಾಹಕ್ಕೆ ತತ್ತರಿಸುತ್ತಿದ್ದರೆ ಇತ್ತ ಈಶಾನ್ಯ ಚೀನಾದಲ್ಲಿ ಬಹುದೊಡ್ಡ ಬೆಂಕಿ ದುರಂತ (Fire) ನಡೆದಿದೆ. ಗೋದಾಮಿನಲ್ಲಿ ಬೆಂಕಿ  ಹೊತ್ತಿಕೊಂಡು 14 ಜನ ಮೃತಪಟ್ಟಿದ್ದಾರೆ..ಸುಮಾರು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಚೀನಾ (China)ದ ಈಶಾನ್ಯ ಪ್ರಾಂತ್ಯವಾದ ಜಿಲಿನ್​ನ ರಾಜಧಾನಿ ಚಂಗ್​ಚುನ್​​ನಲ್ಲಿರುವ ಲಾಜಿಸ್ಟಿಕ್​ ಗೋದಾಮಿಗೆ ಶನಿವಾರ ಬೆಂಕಿ ತಗುಲಿತ್ತು. ಕೂಡಲೇ ಅಗ್ನಿಶಾಮಕ ದಳದವರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ 14 ಜನರ ಜೀವ ಬಲಿಯಾಗಿದೆ. ಅನೇಕರನ್ನು ರಕ್ಷಣೆ ಮಾಡಲಾಗಿದೆ. ಗಾಯಗೊಂಡವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ದುರಂತದ, ರಕ್ಷಣಾ ಕಾರ್ಯಾಚರಣೆಯ ಅನೇಕ ಫೋಟೋಗಳು ಚೀನಾ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಆದರೆ ಈ ಲಾಜಿಸ್ಟಿಕ್​ ಗೋದಾಮಿಗೆ ಬೆಂಕಿ ತಗುಲಲು ಕಾರಣವೇನೆಂಬುದಿನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯೂ ಇದೆ. ಚೀನಾದಲ್ಲಿ ಬೆಂಕಿ ದುರಂತಗಳು ಸಾಮಾನ್ಯ. ಜೂನ್​​ನಲ್ಲಿ ಹೆನಾನ್​ ಪ್ರಾಂತ್ಯದಲ್ಲಿರುವ ಮಾರ್ಶಲ್​ ಆರ್ಟ್​ ಬೋರ್ಡಿಂಗ್​ ಶಾಲೆಯಲ್ಲಿ ಬೆಂಕಿಬಿದ್ದು, 18 ಮಂದಿ ಸಾವನ್ನಪ್ಪಿದ್ದರು. 2010ರಲ್ಲಿ ಶಾಂಘೈನ 28 ಅಂತಸ್ತುಗಳ ವಸತಿ ಕಟ್ಟಡಕ್ಕೆ ಬೆಂಕಿಬಿದ್ದು 58 ಮಂದಿ ಮೃತಪಟ್ಟಿದ್ದನ್ನೂ ಮರೆಯಲಾಗದು.

ಇದನ್ನೂ ಓದಿ: ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

14 Dead 12 Injured In Logistics warehouse fire in China

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?