AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಅಗ್ನಿ ದುರಂತ; ಲಾಜಿಸ್ಟಿಕ್​ ಗೋದಾಮಿಗೆ ಹೊತ್ತಿಕೊಂಡ ಬೆಂಕಿಗೆ 14 ಜನ ಬಲಿ, 26ಕ್ಕೂ ಹೆಚ್ಚು ಮಂದಿಗೆ ಗಾಯ

ಅಗ್ನಿ ದುರಂತದ, ರಕ್ಷಣಾ ಕಾರ್ಯಾಚರಣೆಯ ಅನೇಕ ಫೋಟೋಗಳು ಚೀನಾ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಆದರೆ ಈ ಲಾಜಿಸ್ಟಿಕ್​ ಗೋದಾಮಿಗೆ ಬೆಂಕಿ ತಗುಲಲು ಕಾರಣವೇನೆಂಬುದಿನ್ನೂ ಸ್ಪಷ್ಟವಾಗಿಲ್ಲ.

ಚೀನಾದಲ್ಲಿ ಅಗ್ನಿ ದುರಂತ; ಲಾಜಿಸ್ಟಿಕ್​ ಗೋದಾಮಿಗೆ ಹೊತ್ತಿಕೊಂಡ ಬೆಂಕಿಗೆ 14 ಜನ ಬಲಿ, 26ಕ್ಕೂ ಹೆಚ್ಚು ಮಂದಿಗೆ ಗಾಯ
ಚೀನಾದ ಬೆಂಕಿ ದುರಂತದ ಚಿತ್ರ
TV9 Web
| Edited By: |

Updated on: Jul 25, 2021 | 11:51 AM

Share

ಬೀಜಿಂಗ್​: ಚೀನಾದ ಮಧ್ಯಪ್ರಾಂತ್ಯ ಹೆನಾನ್​ ಪ್ರವಾಹಕ್ಕೆ ತತ್ತರಿಸುತ್ತಿದ್ದರೆ ಇತ್ತ ಈಶಾನ್ಯ ಚೀನಾದಲ್ಲಿ ಬಹುದೊಡ್ಡ ಬೆಂಕಿ ದುರಂತ (Fire) ನಡೆದಿದೆ. ಗೋದಾಮಿನಲ್ಲಿ ಬೆಂಕಿ  ಹೊತ್ತಿಕೊಂಡು 14 ಜನ ಮೃತಪಟ್ಟಿದ್ದಾರೆ..ಸುಮಾರು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಚೀನಾ (China)ದ ಈಶಾನ್ಯ ಪ್ರಾಂತ್ಯವಾದ ಜಿಲಿನ್​ನ ರಾಜಧಾನಿ ಚಂಗ್​ಚುನ್​​ನಲ್ಲಿರುವ ಲಾಜಿಸ್ಟಿಕ್​ ಗೋದಾಮಿಗೆ ಶನಿವಾರ ಬೆಂಕಿ ತಗುಲಿತ್ತು. ಕೂಡಲೇ ಅಗ್ನಿಶಾಮಕ ದಳದವರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ 14 ಜನರ ಜೀವ ಬಲಿಯಾಗಿದೆ. ಅನೇಕರನ್ನು ರಕ್ಷಣೆ ಮಾಡಲಾಗಿದೆ. ಗಾಯಗೊಂಡವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ದುರಂತದ, ರಕ್ಷಣಾ ಕಾರ್ಯಾಚರಣೆಯ ಅನೇಕ ಫೋಟೋಗಳು ಚೀನಾ ಮಾಧ್ಯಮಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಆದರೆ ಈ ಲಾಜಿಸ್ಟಿಕ್​ ಗೋದಾಮಿಗೆ ಬೆಂಕಿ ತಗುಲಲು ಕಾರಣವೇನೆಂಬುದಿನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯೂ ಇದೆ. ಚೀನಾದಲ್ಲಿ ಬೆಂಕಿ ದುರಂತಗಳು ಸಾಮಾನ್ಯ. ಜೂನ್​​ನಲ್ಲಿ ಹೆನಾನ್​ ಪ್ರಾಂತ್ಯದಲ್ಲಿರುವ ಮಾರ್ಶಲ್​ ಆರ್ಟ್​ ಬೋರ್ಡಿಂಗ್​ ಶಾಲೆಯಲ್ಲಿ ಬೆಂಕಿಬಿದ್ದು, 18 ಮಂದಿ ಸಾವನ್ನಪ್ಪಿದ್ದರು. 2010ರಲ್ಲಿ ಶಾಂಘೈನ 28 ಅಂತಸ್ತುಗಳ ವಸತಿ ಕಟ್ಟಡಕ್ಕೆ ಬೆಂಕಿಬಿದ್ದು 58 ಮಂದಿ ಮೃತಪಟ್ಟಿದ್ದನ್ನೂ ಮರೆಯಲಾಗದು.

ಇದನ್ನೂ ಓದಿ: ಸೀಕ್ರೆಟ್​ ಆಗಿ ನಡೆಯಿತು ಬಿಗ್​ ಬಾಸ್​ ಫಿನಾಲೆ; ಫೋಟೋದಿಂದ ಬಯಲಾಯ್ತು ವಿನ್ನರ್​ ಹೆಸರು

‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

14 Dead 12 Injured In Logistics warehouse fire in China

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?